
ನವದೆಹಲಿ : ಪೆಟ್ರೋಲ್, ಡೀಸೆಲ್ ದರ ದಿನದಿನಕ್ಕೂ ಕೂಡ ಏರಿಕೆಯಾಗಿ ಜನರಿಗೆ ಶಾಕ್ ನೀಡುತ್ತಿದೆ. ಭಾರತದ ವಿವಿಧ ನಗರಗಳಲ್ಲಿ ಪೆಟ್ರೋಲ್ ಡೀಸೆಲ್ ದರ ಪ್ರತೀ ಲೀಟರ್ ಗೆ ನೂರರ ಸಮೀಪ ಸಾಗುತ್ತಿದೆ.
ಇದೇ ವೇಳೆ ಪತಂಜಲಿ ಸಂಸ್ಥಾಪಕ ಬಾಬಾ ರಾಮದೇವ್ ಗುಡ್ ನ್ಯೂಸ್ ಒಂದನ್ನು ನೀಡಿದ್ದಾರೆ. ಒಂದು ವೇಳೆ ಸರ್ಕಾರ ಅನುಮತಿ ನೀಡಿ, ತೆರಿಗೆ ವಿನಾಯಿತಿ ನೀಡಿದಲ್ಲಿ 35ರಿಂದ 40 ರು.ಗೆ ಪೆಟ್ರೋಲ್ ನೀಡಲಾಗುವುದು ಎಂದು ಹೇಳಿದ್ದಾರೆ.
ಅಲ್ಲದೇ ಪೆಟ್ರೋಲ್, ಡೀಸೆಲ್ ಅನ್ನು ಅತ್ಯಂತ ಕಡಿಮೆ ಇರುವ ಜಿಎಸ್ ಟಿ ತೆರಿಗೆ ಸ್ಥರದಲ್ಲಿ ತರಬೇಕು ಎಂದು ಈ ವೇಳೆ ಅವರು ಹೇಳಿದ್ದಾರೆ. ಅತ್ಯಧಿಕ ಪೆಟ್ರೋಲ್, ಡೀಸೆಲ್ ದರ ಏರಿಕೆಯಿಂದ ಸದ್ಯ ಜನರ ಜೇಬು ಖಾಲಿಯಾಗುತ್ತಿದೆ. ಈ ನಿಟ್ಟಿನಲ್ಲಿ ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಹೇಳಿದ್ದಾರೆ.
ಪೆಟ್ರೋಲ್, ಡೀಸೆಲ್ ಬೆಲೆ ಪ್ರಧಾನಿ ನರೇಂದ್ರ ಮೋದಿ ಸರ್ಕಾರದ ಅವಧಿಯಲ್ಲಿ ಅತ್ಯಧಿಕ ಪ್ರಮಾಣದಲ್ಲಿ ಏರಿಕೆಯಾಗಿ ದಾಖಲೆ ನಿರ್ಮಾಣವಾಗಿದೆ. ಬೆಲೆ ಏರಿಕೆಯನ್ನು ಖಂಡಿಸಿ ಕೆಲ ದಿನಗಳ ಹಿಂದಷ್ಟೇ ವಿಪಕ್ಷಗಳು ಭಾರತ್ ಬಂದ್ ಆಚರಿಸಿದ್ದವು. ಅದಾದ ನಂತರ ಪಶ್ಚಿಮ ಬಂಗಾಳ, ರಾಜಸ್ಥಾನ, ಕರ್ನಾಟದಲ್ಲಿ ಪೆಟ್ರೋಲ್ ಬೆಲೆಯನ್ನು ಇಳಿಕೆ ಮಾಡಲಾಗಿತ್ತು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.