ಗೌರಿ ಲಂಕೇಶ್‌ಗೆ ನೀಡಿದ ಸರಕಾರಿ ಗೌರವ ಯೋಧನಿಗೇಕಿಲ್ಲ?

Published : Apr 10, 2018, 10:36 AM ISTUpdated : Apr 14, 2018, 01:13 PM IST
ಗೌರಿ ಲಂಕೇಶ್‌ಗೆ ನೀಡಿದ ಸರಕಾರಿ ಗೌರವ ಯೋಧನಿಗೇಕಿಲ್ಲ?

ಸಾರಾಂಶ

'ಹಿರಿಯ ಪತ್ರಕರ್ತೆ ಗೌರಿ ಲಂಕೇಶ್ ಅಂತ್ಯ ಸಂಸ್ಕಾರದ ವೇಳೆ ನೀಡಿದ ಸಕಲ ಸರಕಾರಿ ಗೌರವ, ಕಾರ್ಗಿಲ್ ಯುದ್ಧದಲ್ಲಿ ಹೋರಾಡಿದ ಯೋಧನಿಗೇಕಿಲ್ಲ?' ಎಂದು ರಾಜ್ಯಸಭಾ ಸದಸ್ಯ ರಾಜೀವ್ ಚಂದ್ರಶೇಖರ್ ಅವರು ಸಿಎಂ ಸಿದ್ದರಾಮಯ್ಯ ಮತ್ತು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿಯವರನ್ನು ಪ್ರಶ್ನಿಸಿದ್ದಾರೆ.

ಬೆಂಗಳೂರು:' ಹಿರಿಯ ಪತ್ರಕರ್ತೆ ಗೌರಿ ಲಂಕೇಶ್ ಅಂತ್ಯ ಸಂಸ್ಕಾರದ ವೇಳೆ ನೀಡಿದ ಸಕಲ ಸರಕಾರಿ ಗೌರವ, ಕಾರ್ಗಿಲ್ ಯುದ್ಧದಲ್ಲಿ ಹೋರಾಡಿದ ಯೋಧನಿಗೇಕಿಲ್ಲ?' ಎಂದು ರಾಜ್ಯಸಭಾ ಸದಸ್ಯ ರಾಜೀವ್ ಚಂದ್ರಶೇಖರ್ ಅವರು ಸಿಎಂ ಸಿದ್ದರಾಮಯ್ಯ ಮತ್ತು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿಯವರನ್ನು ಪ್ರಶ್ನಿಸಿದ್ದಾರೆ.

ಹೃದಯಾಘಾತದಿಂದ ಅಸುನೀಗಿದ ನಿವೃತ್ತ ಕರ್ನಲ್ ಎಂ.ಬಿ.ರವೀಂದ್ರನಾಥ್ ಅವರಿಗೆ ಸಕಲ ಸರಕಾರಿ ಗೌರವಗಳೊಂದಿಗೆ ಅಂತ್ಯ ಸಂಸ್ಕಾರ ನೆರವೇರಿಸಬೇಕೆಂದು ಸಿದ್ದರಾಮಯ್ಯ ಅವರನ್ನು ಟ್ವೀಟ್ ಮಾಡಿ, ಸಂಸದರು ಆಗ್ರಹಿಸಿದ್ದರು. ಮಿಲಿಟರಿ ಗೌರವಗಳೊಂದಿಗೆ ರವೀಂದ್ರನಾಥ್ ಅವರ ಅಂತ್ಯಸಂಸ್ಕಾರ ಸ್ವಗ್ರಾಮ ಹೊಳೆಸಿರಗೆರೆಯಲ್ಲಿ ಏ.9ರಂದು ನಡೆಯಿತು.

‘ಸಿದ್ದರಾಮಯ್ಯ ನಾಚಿಕೆಗೆಟ್ಟ ಬೂಟಾಟಿಕೆಯ ರಾಜಕಾರಣಿ. ದೇಶಕ್ಕಾಗಿ ಹೋರಾಡಿದ ಕನ್ನಡಿಗ ಯೋಧ ಮೃತಪಟ್ಟಾಗಲೂ ಕಾಳಜಿ ತೋರಲಿಲ್ಲ. ರಾಹುಲ್​ಗಾಂಧಿ ಜತೆ ಜಾತಿ, ಜಾತಿಗಳನ್ನು ಒಡೆದು ಆಳುವ ರಾಜಕೀಯದಲ್ಲಿ ಬ್ಯುಸಿಯಾಗಿದ್ದಾರೆ,’ ಎಂದು ರಾಜೀವ್ ಕಿಡಿಕಾರಿದ್ದಾರೆ.

ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸಿ, ಕಾರ್ಗಿಲ್ ಯುದ್ಧದಲ್ಲಿ ಮುಂಚೂಣಿಯಲ್ಲಿದ್ದ ರವೀಂದ್ರನಾಥ್ ಸೇವಾವಧಿ ಮುಗಿದ ನಂತರವೂ ಸೇನಾ ಸೇವೆಗೆ ಸೇರಿಕೊಂಡಿದ್ದರು. ಈಗ್ಗೆ ಆರು ತಿಂಗಳ ಹಿಂದೆಯಷ್ಟೇ ನಿವೃತ್ತಿಯಾಗಿದ್ದರು.

 


 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಎಸ್ಸಿ ಒಳ ಮೀಸಲಾತಿ ಜಾರಿ ವಿಧೇಯಕಕ್ಕೆ ಸಂಪುಟ ಅಸ್ತು: ಚಾರಿತ್ರಿಕ ಆದೇಶಕ್ಕೆ ಕಾನೂನು ಬಲ
ಹೈಕಮಾಂಡ್‌ ನಿರ್ಧಾರ ಫೈನಲ್, ಪದೇ ಪದೆ ಯಾಕೆ ಕೇಳ್ತೀರಿ?: ಸಿಎಂ ಸಿದ್ದರಾಮಯ್ಯ