ಸುಳ್ಳು ಅಫಿಡವಿಟ್ ಕೊಟ್ಟರೆ ಅಭ್ಯರ್ಥಿ ಅನರ್ಹ

Published : Dec 24, 2018, 08:32 AM IST
ಸುಳ್ಳು ಅಫಿಡವಿಟ್ ಕೊಟ್ಟರೆ ಅಭ್ಯರ್ಥಿ ಅನರ್ಹ

ಸಾರಾಂಶ

 ಮೇಲ್ಮನೆ ಚುನಾವಣೆ ಅಭ್ಯರ್ಥಿಗಳಿಗೂ ವೆಚ್ಚ ಮಿತಿ | ಚುನಾವಣೆ ವೇಳೆ ಲಂಚ ನೀಡಿದರೆ ತಕ್ಷಣ ಬಂಧನ | ಚುನಾವಣಾ ಸುಧಾರಣೆಗೆ ಆಯೋಗದ ಒಲವು | ಶೀಘ್ರವೇ ಕಾನೂನು ಸಚಿವಾಲಯಕ್ಕೆ ಶಿಫಾರಸು 

ನವದೆಹಲಿ (ಡಿ. 24): ಚುನಾವಣಾ ನೀತಿಯನ್ನು ಮತ್ತಷ್ಟುಕಠಿಣಗೊಳಿಸಲು ಮುಂದಾಗಿರುವ ಕೇಂದ್ರ ಚುನಾವಣಾ ಆಯೋಗ, ಅಭ್ಯರ್ಥಿಯೋರ್ವ ಅಫಿಡವಿಟ್‌ನಲ್ಲಿ ಸುಳ್ಳು ಮಾಹಿತಿ ನೀಡಿದ್ದು ಖಚಿತಗೊಂಡರೆ ಆತನನ್ನು ಅನರ್ಹಗೊಳಿಸುವ ಬಗ್ಗೆ ಚಿಂತನೆ ನಡೆಸಿದೆ.

ಅಲ್ಲದೆ, ಮೇಲ್ಮನೆ ಅಭ್ಯರ್ಥಿಗಳಿಗೂ ಚುನಾವಣೆಯಲ್ಲಿ ವೆಚ್ಚದ ಮಿತಿ ಹಾಕುವ ಮತ್ತು ಚುನಾವಣೆ ವೇಳೆ ಲಂಚ ನೀಡಿದ್ದು ಕಂಡುಬಂದರೆ, ಅವರನ್ನು ತಕ್ಷಣವೇ ಬಂಧಿಸುವ ಅಧಿಕಾರವನ್ನು ಪೊಲೀಸರಿಗೆ ನೀಡುವ ಕಾನೂನು ಜಾರಿ ಕುರಿತು ಕೇಂದ್ರ ಕಾನೂನು ಸಚಿವಾಲಯಕ್ಕೆ ಶಿಫಾರಸು ಮಾಡಲು ನಿರ್ಧರಿಸಿದೆ ಎನ್ನಲಾಗಿದೆ.

ಜ.8ಕ್ಕೆ ಸಂಸತ್ತಿನ ಚಳಿಗಾಲದ ಅಧಿವೇಶನ ಮುಗಿಯಲಿದ್ದು, ಬಳಿಕ ಈ ಪ್ರಸ್ತಾವಗಳನ್ನು ಅದು ಕಾನೂನು ಸಚಿವಾಲಯದ ಮುಂದೆ ಇಡಲು ನಿರ್ಧರಿಸಿದೆ ಎಂದು ಆಯೋಗದ ಮೂಲಗಳು ತಿಳಿಸಿವೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ದಿನಕ್ಕೆರಡು ಬಾರಿ ಠಾಣೆಗೆ ಹಾಜರಾಗಲು ಸೂಚನೆ, ಆದೇಶ ಪ್ರಶ್ನಿಸಿದ ಆರೋಪಿಗೆ 1 ಲಕ್ಷ ರೂ ಪರಿಹಾರ
ಕಂದನ ಸ್ನಾನ ಮಾಡಿಸಲು ಹೋದಾಗ ದುರ್ಘಟನೆ, ಗೀಸರ್ ಸೋರಿಕೆಯಿಂದ ತಾಯಿ-ಮಗು ಸಾವು