
ಬೆಂಗಳೂರು (ಫೆ.07): ಪರೀಕ್ಷೆ ವೇಳೆ ಉತ್ತರ ಪ್ರತಿಕೆಗಳಲ್ಲಿ ದೇವರ ಹೆಸರು ಅಥವಾ ಯಾವುದೇ ಧಾರ್ಮಿಕ ಚಿಹ್ನೆ ಬರೆದರೆ ಅಂಥ ವಿದ್ಯಾರ್ಥಿಗಳನ್ನು ಡಿಬಾರ್ ಮಾಡಲಾಗುವುದು ಎಂದು ಉತ್ತರಪ್ರದೇಶ ಸರ್ಕಾರ ಎಚ್ಚರಿಕೆ ನೀಡಿದೆ.
ಮಂಗಳವಾರದಿಂದ ರಾಜ್ಯದಲ್ಲಿ 10-12ನೇ ತರಗತಿ ಪರೀಕ್ಷೆಗಳು ಆರಂಭವಾಗಿದ್ದು, ಈ ಹಿನ್ನೆಲೆಯಲ್ಲಿ ಸರ್ಕಾರ ಈ ಎಚ್ಚರಿಕೆ ನೀಡಿದೆ. ಕೆಲವು ವಿದ್ಯಾರ್ಥಿಗಳು, ಮೊದಲಿಗೆ ದೇವರು ಹೆಸರು ಬರೆದರೆ ಒಳ್ಳೆಯದಾಗುತ್ತದೆ ಎಂದು ನಂಬಿಕೆ ಹೊಂದಿರುತ್ತಾರೆ. ಇನ್ನು ಕೆಲ ವಿದ್ಯಾರ್ಥಿಗಳು, ದೇವರ ಹೆಸರು ಬರೆದರೆ ಮೌಲ್ಯಮಾಪಕರು ಫೇಲ್ ಮಾಡುವ ಸಾಧ್ಯತೆ ಕಡಿಮೆ ಎಂಬ ನಿರೀಕ್ಷೆಯಿಂದ ಹೊಂದಿರುತ್ತಾರೆ. ಆದರೆ ಇಂಥ ಕ್ರಮ ಕಾನೂನು ಬಾಹಿರ ಎಂದು ಸರ್ಕಾರ ಸ್ಪಷ್ಪಪಡಿಸಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.