
ಬೆಂಗಳೂರು : ಸದ್ಯ ಬಿಜೆಪಿ ಹಾಗೂ ಕಾಂಗ್ರೆಸ್ ನಡುವೆ ಮಹಾಭಾರತ ಜಗಳ ಆರಂಭವಾಗಿದೆ. ಮಹಾಭಾರತದ ಕೌರವರಿಗೆ ಬಿಜೆಪಿ ಹಾಗೂ ಆರ್'ಎಸ್'ಎಸ್ ಹೋಲಿಸಿರುವ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಹೇಳಿಕೆಗೆ ಇದೀಗ ಬಿಜೆಪಿ ಟ್ವಿಟರ್ ಮೂಲಕ ಪ್ರತಿಕ್ರಿಯೆ ನೀಡಿದ್ದಾರೆ.
ಕಾಂಗ್ರೆಸ್’ನವರು ಪಾಂಡವರಾದರೆ ಕೃಷ್ಣನನ್ನು ಏಕೆ ಕೌರವರ ಜೊತೆ ಕಳಿಸಿದರು. ಕೃಷ್ಣ ಅವರ ಬಳಿಯೆ ಇರಬೇಕಿತ್ತು. ಪಾಂಡವರನ್ನು ಬಿಟ್ಟು ಕೃಷ್ಣ ಕೌರವರ ಜೊತೆ ಸೇರಿದ್ದು ಏಕೆ ಎಂದು ಕೇಳಿದ್ದಾರೆ.
ಇತ್ತೀಚೆಗಷ್ಟೇ ಕಾಂಗ್ರೆಸ್ ಹಿರಿಯ ಮುಖಂಡ ಎಸ್.ಎಂ ಕೃಷ್ಣ ಅವರು ಕಾಂಗ್ರೆಸ್ ತೊರೆದು ಬಿಜೆಪಿಯನ್ನು ಸೇರ್ಪಡೆಯಾಗಿದ್ದು, ಈ ಸಂಬಂಧವೇ ಈ ಹೇಳಿಕೆಯನ್ನು ನೀಡಲಾಗಿದೆ ಎನ್ನಲಾಗುತ್ತದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.