ವಿನಯ್ ಕುಲಕರ್ಣಿ ಮೇಲಿನ ಕೊಲೆ ಆರೋಪಕ್ಕೆ ದಾಖಲೆಗಳಿದ್ದರೆ ಕೊಡಿ: ಸಿಎಂ

Published : Dec 01, 2017, 04:10 PM ISTUpdated : Apr 11, 2018, 12:58 PM IST
ವಿನಯ್ ಕುಲಕರ್ಣಿ ಮೇಲಿನ ಕೊಲೆ ಆರೋಪಕ್ಕೆ ದಾಖಲೆಗಳಿದ್ದರೆ ಕೊಡಿ: ಸಿಎಂ

ಸಾರಾಂಶ

ಸಚಿವ ವಿನಯ ಕುಲಕರ್ಣಿ ಪರ ಸಿಎಂ ಮತ್ತೆ ಬ್ಯಾಟಿಂಗ್ ಮಾಡಿದ್ದಾರೆ.  ವಿನಯ್​ ಕುಲಕರ್ಣಿ ವಿರುದ್ಧ ಮಾಡಿರುವ ಆರೋಪಗಳು ಎಲ್ಲ ಸುಳ್ಳು. ಸಚಿವರ ವಿರುದ್ಧದ ಆರೋಪಕ್ಕೆ  ಸೂಕ್ತ ಸಾಕ್ಷಾಧಾರಗಳು ಇಲ್ಲ. ಯೋಗೇಶಗೌಡ ಪ್ರಕರಣಕ್ಕೆ ಸಂಬಂಧಿಸಿದ ವಿಚಾರಣೆ ಕೋರ್ಟ್​ನಲ್ಲಿದೆ. ಎಲ್ಲವೂ ರಾಜಕೀಯ ಪ್ರೇರಿತ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.  

ಬೆಂಗಳೂರು (ಡಿ.01): ಸಚಿವ ವಿನಯ ಕುಲಕರ್ಣಿ ಪರ ಸಿಎಂ ಮತ್ತೆ ಬ್ಯಾಟಿಂಗ್ ಮಾಡಿದ್ದಾರೆ.  ವಿನಯ್​ ಕುಲಕರ್ಣಿ ವಿರುದ್ಧ ಮಾಡಿರುವ ಆರೋಪಗಳು ಎಲ್ಲ ಸುಳ್ಳು. ಸಚಿವರ ವಿರುದ್ಧದ ಆರೋಪಕ್ಕೆ  ಸೂಕ್ತ ಸಾಕ್ಷಾಧಾರಗಳು ಇಲ್ಲ. ಯೋಗೇಶಗೌಡ ಪ್ರಕರಣಕ್ಕೆ ಸಂಬಂಧಿಸಿದ ವಿಚಾರಣೆ ಕೋರ್ಟ್​ನಲ್ಲಿದೆ.  ಎಲ್ಲವೂ ರಾಜಕೀಯ ಪ್ರೇರಿತ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.  

ಸಚಿವರ ಕೈವಾಡದ ಬಗ್ಗೆ ಯಾವ ದಾಖಲೆ ಇದೆ‌? ಪೊಲೀಸ್ ಅಧಿಕಾರಿ ಸಂಧಾನಕ್ಕೆ ಬಂದ ಬಗ್ಗೆ ಯಾವುದೇ ದಾಖಲೆಗಳು ಇಲ್ಲ.  ದಾಖಲೆ ಇದ್ದರೆ ಕೊಡಿ ಎಂದು ಸಿಎಂ ಸಿದ್ದರಾಮಯ್ಯ ಕೇಳಿದ್ದಾರೆ.  ದಾಖಲೆಗಳನ್ನು ಎಲ್ಲಿಗೆ  ತಲುಪಿಸಬೇಕು ಎಂದು  ಸುವರ್ಣ ನ್ಯೂಸ್ ವರದಿಗಾರ ಮರು ಪ್ರಶ್ನಿಸಿದಾಗ, ನನ್ನ ಕಚೇರಿಗೆ ತಲುಪಿಸಿ ಎಂದ ಸಿಎಂ ಹೇಳಿದ್ದಾರೆ.

ಇನ್ನು ಮುಂದುವರೆದು ಪ್ರಶ್ನಿಸಿದಾಗ ಸುವರ್ಣ ನ್ಯೂಸ್ ವರದಿಗಾರನ ಪ್ರಶ್ನೆಗಳಿಗೆ ಸಮರ್ಪಕ ಉತ್ತರ ನೀಡದೇ ಸಿಎಂ ಜಾರಿಕೊಂಡಿದ್ದಾರೆ.

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ರೈಲ್ವೆ ಪ್ರಯಾಣಿಕರಿಗೆ ಬೆಲೆ ಏರಿಕೆ ಶಾಕಿಂಗ್ ನ್ಯೂಸ್; ಡಿ.26ರಿಂದಲೇ ಹೊಸ ದರಗಳು ಅನ್ವಯ
Hate Speech Bill: ಒಬ್ಬ ವ್ಯಕ್ತಿಯ ಮಾತನ್ನು ದ್ವೇಷಭಾಷಣ ಅಂತ ಹೇಗೆ ಸಾಬೀತು ಮಾಡುತ್ತೀರಿ