ಸನದಿ ಎಂಬ ಪ್ರಮಾಣಿಕ ದುರದೃಷ್ಟವಂತ ರಾಜಕಾರಣಿ : ಪ್ರಶಂಸೆ ಸಿಕ್ಕರೂ ಸ್ಥಾನಮಾನ ಸಿಗುತ್ತಿಲ್ಲ

Published : Mar 13, 2018, 10:10 PM ISTUpdated : Apr 11, 2018, 01:11 PM IST
ಸನದಿ ಎಂಬ ಪ್ರಮಾಣಿಕ  ದುರದೃಷ್ಟವಂತ ರಾಜಕಾರಣಿ : ಪ್ರಶಂಸೆ ಸಿಕ್ಕರೂ  ಸ್ಥಾನಮಾನ ಸಿಗುತ್ತಿಲ್ಲ

ಸಾರಾಂಶ

2008ರಲ್ಲಿ ಒಮ್ಮೆ ಸ್ವತಃ ಸೋನಿಯಾ ಗಾಂಧಿ ನಿಮ್ಮನ್ನು ರಾಜಸ್ಥಾನದ ರಾಜ್ಯಪಾಲರನ್ನಾಗಿ ಮಾಡುತ್ತೇವೆ ಎಂದು ಹೇಳಿ 24 ಗಂಟೆಯೊಳಗೆ ಮಾರ್ಗರೇಟ್ ಆಳ್ವಾ ಹೆಸರು ಪ್ರಕಟವಾಗಿತ್ತಂತೆ

ಮೂರು ಬಾರಿ ಸಂಸದರಾಗಿದ್ದ ಪ್ರೊ. ಐ ಜಿ ಸನದಿ ಈಗಲೂ ಹುಬ್ಬಳ್ಳಿಯಿಂದ ದೆಹಲಿಗೆ ಬರುವುದು ಗೋವಾ ಎಕ್ಸ್‌ಪ್ರೆಸ್

ರೈಲಿನಲ್ಲಿ. ದಿಲ್ಲಿಯಲ್ಲಿ ಸಿಂಪಲ್ ಆಗಿ ರಿಕ್ಷಾದಲ್ಲೇ ಓಡಾಡುವ ಸನದಿ ಸಾಹೇಬರು ಎಷ್ಟೇ ಸೋನಿಯಾ, ರಾಹುಲ್ ಗಾಂಧಿ ಮನೆಗೆ ಎಡತಾಕಿದರೂ ‘ಆಪ್ ತೋ ಬಹುತ್ ಹಿ ಸೀದೇ ಸಾದೆ ಹೋ’ ಎಂದು ಪ್ರಶಂಸೆ ಮಾಡುತ್ತಾರೆಯೇ ವಿನಃ ಯಾವುದೇ ಸ್ಥಾನಮಾನ ಮಾತ್ರ ಕೊಡೋದಿಲ್ಲವಂತೆ. 2008ರಲ್ಲಿ ಒಮ್ಮೆ ಸ್ವತಃ ಸೋನಿಯಾ ಗಾಂಧಿ ನಿಮ್ಮನ್ನು ರಾಜಸ್ಥಾನದ ರಾಜ್ಯಪಾಲರನ್ನಾಗಿ ಮಾಡುತ್ತೇವೆ ಎಂದು ಹೇಳಿ 24 ಗಂಟೆಯೊಳಗೆ ಮಾರ್ಗರೇಟ್ ಆಳ್ವಾ ಹೆಸರು ಪ್ರಕಟವಾಗಿತ್ತಂತೆ. ಆದರೆ ಸ್ವಲ್ಪವೂ ಬೇಸರಿಸಿಕೊಳ್ಳದೆ ಓಡಾಡುವ ಸನದಿ ಸಾಹೇಬರು,‘ಅಯ್ಯೋ ಬಿಡ್ರಿ, ನಾನೊಬ್ಬ ಕೋರ್ಟ್‌ನಲ್ಲಿ ಬೇಲಿಫ್ ಆಗಿದ್ದ ತಂದೆಯ ಮಗ. ಪಕ್ಷ ನನಗೆ ಏನೆಲ್ಲ ಕೊಟ್ಟಿದೆ’ ಎಂದು ಹೇಳಿ ನಗುತ್ತಾರೆ. ನೆಹರು ಅವರನ್ನು ನೋಡಿದ್ದ ಸನದಿ, ಇಂದಿರಾ, ರಾಜೀವ್, ಸೋನಿಯಾ ಭಾಷಣವನ್ನು ಕನ್ನಡಕ್ಕೆ ತರ್ಜುಮೆ ಮಾಡಿದವರು. ಕಳೆದ ತಿಂಗಳು ರಾಹುಲ್ ಭಾಷಣವನ್ನು ಕೂಡ ಶಿರಹಟ್ಟಿಯಲ್ಲಿ ಭಾಷಾಂತರ ಮಾಡಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

SSLC ಫಲಿತಾಂಶ ಪ್ರಗತಿ: ಮಧ್ಯರಾತ್ರಿ ವಿದ್ಯಾರ್ಥಿಗಳ ಮನೆ ಬಾಗಿಲಿಗೆ ಬಂದ BEO!
ಹಾಸನದ ತಿರುಪತಿಹಳ್ಳಿ ಬೆಟ್ಟದ ಮೇಲೆ 50ಕ್ಕೂ ಅಧಿಕ ಉಲ್ಕೆಗಳ ಸುರಿಮಳೆ!