
ಬೆಂಗಳೂರು(ಮಾ.07): ಅಕ್ರಮ ಆಸ್ತಿ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲು ಸೇರಿರೋ ಎಐಎಡಿಎಂಕೆ ಪಕ್ಷದ ನಾಯಕಿ ಶಶಿಕಲಾ ಅನಾರೋಗ್ಯದಿಂದ ಬಳಲುತ್ತಿದ್ದಾರೆ. ಹೀಗಂತ ಜೈಲಿನ ಮೂಲಗಳಿಂದ ಮಾಹಿತಿ ಹೊರಬೀಳುತ್ತಿದ್ದಂತೆ, ಐಪಿಎಸ್ ಅಧಿಕಾರಿ ರೂಪಾ ಟ್ವಿಟರ್ ಮೂಲಕ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದಾರೆ.
ಅನಾರೋಗ್ಯ ಕಾರಣವನ್ನು ಮುಂದಿಟ್ಟುಕೊಂಡು ಯಾರು ಅಧಿಕಾರ ದುರುಪಯೋಗ ಪಡಿಸಿಕೊಳ್ಳಬಾರದು. ತಮ್ಮ ಪ್ರಭಾವ ಬಳಸಿ ವಿಶೇಷ ವೈದ್ಯರ ಬಳಿ ಚಿಕಿತ್ಸೆ ಪಡೆಯಲು ಇಂತಹ ಸಮಯವನ್ನು ಬಳಸಿಕೊಳಗಳುತ್ತಾರೆ. ಹೈಫೈ ಎಸಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯೋ ನೆಪದಲ್ಲಿ ಹಾಯಾಗಿರುತ್ತಾರೆ. ಅಲ್ಲಿ ಯಾವ ವ್ಯಕ್ತಿಯನ್ನು ಬೇಕಾದರು ಭೇಟಿಯಾಗುವ ಸಾಧ್ಯತೆ ಇರುತ್ತದೆ ಎಂದು ರೂಪಾ ಟ್ವೀಟ್ ಮಾಡಿದ್ದಾರೆ.
ಈ ಹಿಂದೆ ನಾನು ಕಾರಾಗೃಹಗಳ ಡಿಐಜಿ ಆಗಿದ್ದಾಗ ಹೊಸ ನಿಯಮ ಜಾರಿಗೆ ತಂದಿದ್ದೆ. ಪ್ರತಿ ಕೈದಿಗೂ ಟಿಬಿ ಮತ್ತು ಎಚ್'ಐವಿ ಸೇರಿದಂತೆ ಎಲ್ಲಾ ಬಗೆಯ ಟೆಸ್ಟ್' ಗಳನ್ನು ಜೈಲಿನ ಆಸ್ಪತ್ರೆಯಲ್ಲೇ ಮಾಡಿಸಲಾಗುತ್ತಿತ್ತು. ಅದರ ಬಳಕೆಯಾಗಬೇಕಿದೆ ಅಂತ ಐಪಿಎಸ್ ಅಧಿಕಾರಿ ರೂಪಾ ಟ್ವೀಟ್ ಮಾಡಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.