
ಬೆಂಗಳೂರು[ಜ.04] ವಿಧಾನಸೌಧದ ಬಳಿ 14 ಲಕ್ಷ ರೂ. ಅಕ್ರಮ ಹಣವನ್ನು ವಶಪಡಿಸಿಕೊಳ್ಳಲಾಗಿದೆ.ಸಚಿವ ಪುಟ್ಟರಂಗ ಶೆಟ್ಟಿ ಸಚಿವಾಲಯದ ಮೋಹನ್ ಎಂಬುವರನ್ನು ವಶಕ್ಕೆ ಪಡೆದಿದ್ದು ದಾಖಲೆಗಳಿಲ್ಲದ 14 ಲಕ್ಷ ರೂ. ವಶಪಡಿಸಿಕೊಳ್ಳಲಾಗಿದೆ.
ಶುಕ್ರವಾರ ಸಂಜೆ 4 ಗಂಟೆ ಸುಮಾರಿಗೆ ಹಣ ವಶಪಡಿಸಿಕೊಳ್ಳಲಾಗಿದ್ದು ಸಚಿವರಿಗೆ ತಲುಪಿಸಲು ಯಾರೋ ಹಣ ನೀಡಿದ್ದರು ಎನ್ನಲಾಗಿದೆ. ಯಾವುದೋ ಗುತ್ತಿಗೆದಾರರಿಂದ ಹಣ ಪಡೆದುಕೊಳ್ಳಲಾಗಿದೆ ಎಂಬ ಮಾತು ಕೇಳಿ ಬಂದಿದ್ದು ಇದಕ್ಕೆ ಗಿರಿಜನ ಅಭಿವೃದ್ಧಿ ನಿಗಮದ ಲಿಂಕ್ ಸಹ ಇದೆ ಎನ್ನಲಾಗಿದೆ.
ಪ್ರಧಾನಿ ನರೇಂದ್ರ ಮೋದಿಗೆ ಸವಾಲು ಹಾಕಿದ ಕೆಪಿಸಿಸಿ ಅಧ್ಯಕ್ಷ
ಬಿಜೆಪಿ ನಾಯಕ ಸುರೇಶ್ ಕುಮಾರ್ ಸಹ ಈ ಪ್ರಕರಣಕ್ಕೆ ಸಂಬಂಧಿಸಿ ಟ್ವೀಟ್ ಮಾಡಿದ್ದಾರೆ. ಹಿಂದೆ ಸಿದ್ದರಾಮಯ್ಯ ಸರಕಾರ ಇದ್ದಾಗಲೂ ವಿಧಾನಸೌಧದ ಬಳಿ ಕೋಟಿಗಟ್ಟಲೆ ಹಣ ಪತ್ತೆಯಾಗಿತ್ತು.
ಕಪ್ಪು ಬಣ್ಣದ ಬ್ಯಾಗ್ನಲ್ಲಿ ಮೋಹನ್ ಹಣವನ್ನು ತೆಗೆದುಕೊಂಡು ಹೋಗುತ್ತಿದ್ದರು. ಅನುಮಾನ ಬಂದು ಪೊಲೀಸರು ಬ್ಯಾಗ್ ತಪಾಸಣೆ ನಡೆಸಿದಾಗ ಹಣ ಪತ್ತೆಯಾಗಿದೆ. ಇದು ನನ್ನ ಸ್ವಂತ ಹಣ ಎಂದು ಮೋಹನ್ ಪೊಲೀಸರ ಬಳಿ ಹೇಳುತ್ತಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.