
ಬೆಂಗಳೂರು, [ಅ.10]: ನ್ಯಾಯಾಂಗ ಬಂಧನದಲ್ಲಿರುವ ಮಾಜಿ ಸಚಿವ ಡಿಕೆ ಶಿವಕುಮಾರ್ ಅವರಿಗೆ ಅಕ್ರಮ ಕಲ್ಲುಗಣಿಗಾರಿಕೆ ಕಂಟಕ ಎದುರಾಗಿದೆ.
ಕನಕಪುರದಲ್ಲಿ ಅಕ್ರಮ ಕಲ್ಲುಗಣಿಗಾರಿಕೆ ಆರೋಪ ಪ್ರಕರಣವನ್ನು ಸಿಬಿಐ ತನಿಖೆ ಕೋರಿ ಎ.ಸಿ.ಶಿವರಾಜ್ ಸಲ್ಲಿಸಿದ್ದ ಪಿಐಎಲ್ ನ್ನು ಇಂದು [ಗುರುವಾರ] ವಿಚಾರಣೆ ನಡೆಸಿದ ಕರ್ನಾಟಕ ಹೈಕೋರ್ಟ್, ಕೈಗೊಂಡ ಕ್ರಮದ ಬಗ್ಗೆ ವರದಿ ನೀಡಲು ಹೈಕೋರ್ಟ್ ಆದೇಶ ಹೊರಡಿಸಿದೆ. ಅಲ್ಲದೇ ಅರಣ್ಯ ಒತ್ತುವರಿ ತೆರವಿನ ಬಗ್ಗೆ ಮಾಹಿತಿ ಜತೆಗೆ ಇಲಾಖೆಯ ವಿಚಾರಣಾ ವರದಿ ಸಲ್ಲಿಸುವಂತೆಯೂ ಸೂಚನೆ ನೀಡಿದೆ.
ಡಿಕೆ ಶಿವಕುಮಾರ್ಗೆ ಮತ್ತೊಂದು ಕಂಟಕ: ಇಡಿ ಬಳಿಕ ಸಿಬಿಐ ಅಟ್ಯಾಕ್!
ಅರಣ್ಯಾಧಿಕಾರಿ ಯು.ವಿ.ಸಿಂಗ್ ಅವರು ಸರ್ಕಾರಕ್ಕೆ ಸಲ್ಲಿಸಿದ್ದ ವರದಿಯನ್ನು ಜಾರಿಗೊಳಿಸುವಂತೆ ಕೋರಿ ಎ.ಸಿ.ಶಿವರಾಜ್ ಎಂಬುವವರು ಹೈಕೋರ್ಟ್ನಲ್ಲಿ ಪಿಐಎಲ್ ಅರ್ಜಿ ಸಲ್ಲಿಸಿದ್ದರು. ಈ ಹಿನ್ನೆಲೆಯಲ್ಲಿ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್, ಕೈಗೊಂಡ ಕ್ರಮದ ಬಗ್ಗೆ ವರದಿ ನೀಡಲು ಆದೇಶ ಹೊರಡಿಸಿದೆ.
ನವಂಬರ್ 30ರೊಳಗೆ ಆಕ್ಷೇಪಣೆ ಸಲ್ಲಿಸಲು ಸರ್ಕಾರಕ್ಕೆ ಸೂಚನೆ ನೀಡಿ ಪಿಐಎಲ್ ವಿಚಾರಣೆ ಡಿಸೆಂಬರ್ 5ಕ್ಕೆ ಮುಂದೂಡಿದೆ.
ಕನಕಪುರದಲ್ಲಿ ಅಕ್ರಮ ಕಲ್ಲುಗಣಿಗಾರಿಕೆ ಪ್ರಕರಣದ ತನಿಖೆಗಾಗಿ ಅರಣ್ಯಾಧಿಕಾರಿ ಡಾ.ಯು.ವಿ.ಸಿಂಗ್ ನೇತೃತ್ವದ ಸಮಿತಿ ರಚಿಸಲಾಗಿತ್ತು. 22 ಅರಣ್ಯ ಅಧಿಕಾರಿಗಳ ವಿರುದ್ಧ ವಿಚಾರಣೆ ನಡೆಸಿತ್ತು. ಅಲ್ಲದೇ ಒಟ್ಟು 143 ಅರಣ್ಯ ಪ್ರಕರಣಗಳನ್ನು ದಾಖಲಿಸಲಾಗಿತ್ತು. ಈ ಪೈಕಿ 63 ಕೇಸುಗಳಲ್ಲಿ ಆರೋಪ ಪಟ್ಟಿ ಸಲ್ಲಿಸಲಾಗಿತ್ತು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.