
ಚಿಕ್ಕಮಗಳೂರು: ಬಿಜೆಪಿ ರಾಜ್ಯಾಧ್ಯಕ್ಷರ ಹುದ್ದೆಯ ಬಗ್ಗೆ ಕೇಳಿದಾಗ, ಅದು, ಅಧಿಕಾರದ ಹುದ್ದೆ ಅಲ್ಲ, ಜವಾಬ್ದಾರಿ. ಈ ಬಗ್ಗೆ ಪಕ್ಷದ ಹಿರಿಯ ಮುಖಂಡರು ಚರ್ಚಿಸಿ ತೀರ್ಮಾನ ತೆಗೆದುಕೊಳ್ಳುತ್ತಾರೆ ಎಂದು ಶಾಸಕ ಸಿ.ಟಿ.ರವಿ ಹೇಳಿದ್ದಾರೆ.
ಅರ್ಹತೆ ಇದ್ದರೆ ಪಕ್ಷದ ಕಾರ್ಯಕರ್ತನಿಗೆ ಈ ಹುದ್ದೆ ಸಿಗಬಹುದು. ಇದಕ್ಕೆ ಮೀಸಲಾತಿ ಇಲ್ಲ, ಮೆರಿಟ್ ಇದೆ. ಈ ಹುದ್ದೆ ಯಾರಿಗೆ ಕೊಟ್ಟರೂ ಸಂತೋಷ. ಪಕ್ಷ ಬಯಸಿ ಕೊಟ್ಟಿದನ್ನು ಸ್ವೀಕಾರ ಮಾಡಿದ್ದೇನೆ ಎಂದರು. ಶುಕ್ರವಾರ ಪತ್ರಕರ್ತರು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿ, ಪಕ್ಷ ಬಯಸಿದರೆ ರಾಜ್ಯಾಧ್ಯಕ್ಷ ಹುದ್ದೆ ನಿಭಾಯಿಸುತ್ತೇನೆ ಎಂದರು.
ಮೈತ್ರಿ ಸರ್ಕಾರ ಹೆಚ್ಚು ದಿನ ಉಳಿಯಲ್ಲ: ಲೋಕಸಭಾ ಚುನಾವಣಾ ಫಲಿತಾಂಶ ಬಳಿಕ ಮೈತ್ರಿ ಪಕ್ಷಗಳ ಆಂತರಿಕ ಸಂಘರ್ಷ ತಡೆಯಲು ಆಗುವುದಿಲ್ಲ. ಆ ಕಾರಣಕ್ಕಾಗಿ ಈ ಸರ್ಕಾರ ಹೆಚ್ಚು ದಿನ ಉಳಿಯುವುದಿಲ್ಲ. ಈಗಾಗಲೇ ಜಿ.ಟಿ. ದೇವೇಗೌಡ, ರಮೇಶ್ ಜಾರಕಿಹೊಳಿ,
ಕೋಲಾರದಲ್ಲಿ ಮುನಿಯಪ್ಪ ಬೆಂಬಲಿಗರು, ತಮ್ಮ ಮಿತ್ರ ಪಕ್ಷಗಳ ಬಗ್ಗೆ ಅಸಮಾಧಾನ ಹೊರಹಾಕಿದ್ದಾರೆ ಎಂದು ಹೇಳಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.