ನಾನು ಮುಖ್ಯಮಂತ್ರಿ ಸ್ಥಾನದ ಪ್ರಬಲ ಆಕಾಂಕ್ಷಿ

Published : May 12, 2019, 03:19 PM IST
ನಾನು ಮುಖ್ಯಮಂತ್ರಿ  ಸ್ಥಾನದ ಪ್ರಬಲ ಆಕಾಂಕ್ಷಿ

ಸಾರಾಂಶ

ತಾವೂ ಕೂಡ ಮುಖ್ಯಮಂತ್ರಿ ಸ್ಥಾನದ  ಪ್ರಭಲ ಆಕಾಂಕ್ಷಿ ಎಂದು ಸಚಿವ ಎಂ.ಬಿ ಪಾಟೀಲ್ ಹೇಳಿದ್ದಾರೆ. 

ಕಲಬುರಗಿ : ರಾಜ್ಯ ಸರ್ಕಾರ ಪತನದ ವಿಚಾರ ಸಾಕಷ್ಟು ಸದ್ದು ಮಾಡುತ್ತಿದ್ದು, ತಾವೂ ಕೂಡ  ಸಚಿವ ಸ್ಥಾನದ ಪ್ರಬಲ ಆಕಾಂಕ್ಷಿ ಎಂದು ಸಚಿವ ಎಂ.ಬಿ.ಪಾಟೀಲ್ ಹೇಳಿದ್ದಾರೆ. 

ಐದು ಬಾರಿ ಶಾಸಕನಾಗಿ, ಸಂಸದನಾಗಿಮ ನೀರಾವರಿ ಸಚಿವನಾಗಿ , ಗೃಹ ಸಚಿವನಾಗಿ ಅನುಭವ ಇದೆ. ಸಿಎಂ ಆಗುವ ಅರ್ಹತೆ ಇಲ್ಲವೇ ಎಂದು ಪ್ರಶ್ನೆ ಮಾಡಿದ್ದಾರೆ. 

ಅಲ್ಲದೇ ಸದ್ಯ ಕೈ ಹಾಗೂ ಜೆಡಿಎಸ್ ಮೈತ್ರಿ ಮಾಡಿಕೊಂಡಿದ್ದು,  ಕುಮಾರಸ್ವಾಮಿ ಐದು ವರ್ಷ ಆಡಳಿತ ಪೂರ್ಣಗೊಳಿಸಲಿದ್ದಾರೆ. ಮುಂದಿನ ಅವಧಿಯಲ್ಲಿ ಕಾಂಗ್ರೆಸ್ ಸ್ವಂತ ಬಲದ ಮೇಲೆ ಅಧಿಕಾರಕ್ಕೆ ಬರಲಿದ್ದು, ಆಗ ಸಿದ್ದರಾಮಯ್ಯಗೆ ಮೊದಲ ಆದ್ಯತೆ. ಅವರ ನಂತರ ನಾನು ಮುಖ್ಯಮಂತ್ರಿಯಾಗುತ್ತೇನೆ ಎಂದರು.

ಇನ್ನು ರಾಜ್ಯದ ಎರಡು ಕ್ಷೇತ್ರಗಳಾದ ಚಿಂಚೋಳಿ ಹಾಗೂ ಕುಂದಗೊಳದಲ್ಲಿ ಉಪ ಚುನಾವಣೆ ನಡೆಯುತ್ತಿದ್ದು, ಎರಡೂ ಕ್ಷೇತ್ರಗಳಲ್ಲಿಯೂ ಕಾಂಗ್ರೆಸ್ ಗೆಲುವು ಖಚಿತ ಎಂದರು. 

ಸರ್ಕಾರ ಪತನದ ವಿಚಾರದ ಬಗ್ಗೆಯೂ ಪ್ರತಿಕ್ರಿಯಿಸಿದ ಎಂ.ಬಿ ಪಾಟೀಲ್ ಬಿಜೆಪಿಯವರು ಎಷ್ಟು ಸಲ ಹೇಳಿದರು ಅದು ಸಾಧ್ಯವಿಲ್ಲ. ಯುಗಾದಿ, ದೀಪಾವಳಿ, ಅಮಾವಾಸ್ಯೆ, ಹುಣ್ಣಿಮೆ 20-25 ಡೆಡ್ ಲೈನ್ ಕೊಟ್ಟಿದ್ದಾಯ್ತು. ಕಾಂಗ್ರೆಸಲ್ಲಿ ಯಾವ ಶಾಸಕರೂ ಅಸಮಾಧಾನಗೊಂಡಿಲ್ಲ ಯಡಿಯೂರಪ್ಪ 20 ಜನ ಅಸಮಾಧಾನಗೊಂಡವರ ಲಿಸ್ಟ್ ಕೊಡಲಿ ಎಂದು ಸವಾಲು ಹಾಕಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಕೊಪ್ಪಳದಲ್ಲಿ ಭೀಕರ ಅಪಘಾತ, ಬೈಕ್‌ನಲ್ಲಿದ್ದ ಮೂವರು ಸ್ಥಳದಲ್ಲೇ ಸಾವು
ವನ್ಯಜೀವಿ-ಮಾನವ ಸಂಘರ್ಷ ಶಾಶ್ವತ ಪರಿಹಾರಕ್ಕೆ ಕ್ರಮ: ಸಚಿವ ಈಶ್ವರ್‌ ಖಂಡ್ರೆ