
ಮೈಸೂರು (ನ.30): ಐಕ್ಯತಾ ಸಮಾವೇಶದಲ್ಲಿ ಮೋದಿ ವಿರುದ್ಧ ಸಿಎಂ ವಾಗ್ದಾಳಿ ನಡೆಸಿದ್ದಾರೆ. ಭಾಷಣದಲ್ಲಿ ತಮ್ಮನ್ನು ತಾವೇ ಪರಿಚಯ ಮಾಡಿಕೊಂಡಿದ್ದಾರೆ. ನನ್ನ ಹೆಸರು ಸಿದ್ದರಾಮಯ್ಯ. ನಮ್ಮ ಮನೆ ದೇವರು ಸಿದ್ದರಾಮೇಶ್ವರ. ನಾವು ಕೂಡ ನಮ್ಮ ಊರಲ್ಲಿ ರಾಮಮಂದಿರ ಕಟ್ಟಿಕೊಂಡಿದ್ದೇವೆ. ನಾವೇನು ಹಿಂದೂಗಳೇ ಅಲ್ವಾ? ನಾನು ಕೂಡ ಹಿಂದೂನೇ. ಬಿಜೆಪಿಯವರೇನು ಹಿಂದೂ ಧರ್ಮ ಗುತ್ತಿಗೆ ತಗೆದುಕೊಂಡಿದ್ದಾರಾ? ನಾನು ಹಿಂದೂಗಳನ್ನ ಪ್ರೀತಿಸುವಷ್ಟೇ ಅಲ್ಪಸಂಖ್ಯಾತರನ್ನು ಪ್ರೀತಿಸುತ್ತೇನೆ ಎಂದು ಬಿಜೆಪಿ ನಾಯಕರಿಗೆ ಸಿಎಂ ಸಿದ್ದರಾಮಯ್ಯ ಚಾಟಿ ಬೀಸಿದ್ದಾರೆ.
ಸಬ್ ಕ್ ಸಾಥ್ ಸಬ್ ಕ್ ವಿಕಾಸ್ ಕುರಿತು ಸಿಎಂ ವ್ಯಂಗ್ಯವಾಡಿದ್ದಾರೆ. ಅಲ್ಪಸಂಖ್ಯಾತರನ್ನು ಕೈಬಿಟ್ಟು ನೀವು ಎಂಥಾ ವಿಕಾಸ್ ಮಾಡ್ತೀರಾ ? ಬಿಜೆಪಿ ನಾಯಕರಿಗೆ ಸಂವಿಧಾನದಲ್ಲಿ ನಂಬಿಕೆಯಿಲ್ಲ. ಈ ಕಾರಣಕ್ಕಾಗಿ ಈ ದೇಶವನ್ನು ಆಳ್ವಿಕೆ ಮಾಡುವ ಅರ್ಹತೆ ಇವರಿಗಿಲ್ಲ ಎಂದು ಮೈಸೂರಿನಲ್ಲಿ ಮೋದಿ ಮತ್ತು ಯಡ್ಡಿ ವಿರುದ್ದ ಸಿಎಂ ತೀವ್ರ ವಾಗ್ದಾಳಿ ನಡೆಸಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.