
ಬೆಂಗಳೂರು : ಮಲ್ಲೇಶ್ವರ ವಿಧಾನಸಭಾ ಕ್ಷೇತ್ರದಿಂದ ನನ್ನ ಪುತ್ರ ಸ್ಪರ್ಧೆ ಮಾಡುವುದಿಲ್ಲ. ನಾನು ಹಾಗೂ ನನ್ನ ಪುತ್ರ ಇಬ್ಬರೂ ಚುನಾವಣೆಯಲ್ಲಿ ಸ್ಪರ್ಧಿಸುತ್ತಿಲ್ಲ ಎಂದು ಯೋಜನಾ ಮತ್ತು ಸಾಂಖ್ಯಿಕ ಸಚಿವ ಎಂ.ಆರ್. ಸೀತಾರಾಂ ಸ್ಪಷ್ಟಪಡಿಸಿದ್ದಾರೆ.
ಗುರುವಾರ ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಹಾಗೂ ನನ್ನ ಮಗ ಟಿಕೆಟ್ ಇಬ್ಬರೂ ಆಕಾಂಕ್ಷಿಯಲ್ಲ. ನನ್ನ ಪುತ್ರ ಮಲ್ಲೇಶ್ವರ ವಿಧಾನಸಭಾ ಕ್ಷೇತ್ರದ ಆಕಾಂಕ್ಷಿ ಎಂದು ಹೇಳಲಾಗಿತ್ತು. ಆದರೆ ಮುಂದಿನ ಐದು ವರ್ಷ ಯುವ ಕಾಂಗ್ರೆಸ್ಸಿನಲ್ಲಿಯೇ ಕೆಲಸ ಮಾಡುವಂತೆ ಹೇಳಿದ್ದೇನೆ.
ಪಕ್ಷಕ್ಕಾಗಿ ದುಡಿದ ಅನುಭವ ಬಂದ ಮೇಲೆ ಸ್ಪರ್ಧಿಸಲಿ ಎಂಬ ಉದ್ದೇಶದಿಂದ ಟಿಕೆಟ್ಗೆ ಅರ್ಜಿ ಸಲ್ಲಿಸುವಂತೆಯೂ ತಿಳಿಸಿಲ್ಲ ಎಂದು ಹೇಳಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.