ನಾನು ಗೌಡ ಕುಟುಂಬದ ವಿರೋಧಿ, ಮೈತ್ರಿಗೆ ಬೆಂಬಲವಿಲ್ಲ : ಕಾಂಗ್ರೆಸ್ ಮುಖಂಡ

Published : Oct 23, 2018, 10:34 AM IST
ನಾನು ಗೌಡ ಕುಟುಂಬದ ವಿರೋಧಿ, ಮೈತ್ರಿಗೆ ಬೆಂಬಲವಿಲ್ಲ : ಕಾಂಗ್ರೆಸ್ ಮುಖಂಡ

ಸಾರಾಂಶ

 ಉಪಚುನಾವಣೆಯಲ್ಲಿ ಜೆಡಿಎಸ್ -ಕಾಂಗ್ರೆಸ್ ಮೈತ್ರಿಗೆ ತಮ್ಮ ಬೆಂಬಲವಿಲ್ಲಎಂದು ಕಾಂಗ್ರೆಸ್ ಮುಖಂಡ ಎ ಮಂಜು ಹೇಳಿದ್ದಾರೆ. ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಕುಟುಂಬ ರಾಜಕಾರಣದ ವಿರೋಧಿಯಾಗಿದ್ದು, ಈಗಲೂ ಅದನ್ನೇ ಮುಂದುವರಿಸುತ್ತೇನೆ ಎಂದು ಈ ವೇಳೆ ಹೇಳಿದ್ದಾರೆ. 

ಹಾಸನ: ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಕುಟುಂಬದ ವಿರುದ್ಧ ಮತ್ತೆ ವಾಗ್ದಾಳಿ ನಡೆಸಿರುವ ಮಾಜಿ ಸಚಿವ ಎ.ಮಂಜು, ಉಪ ಚುನಾವಣೆಯಲ್ಲಿ ಜೆಡಿಎಸ್ -ಕಾಂಗ್ರೆಸ್ ಮೈತ್ರಿಗೆ ತಮ್ಮ ಬೆಂಬಲವಿಲ್ಲ ಎಂದು ಸ್ಪಷ್ಟಪಡಿಸಿ ದ್ದಾರೆ. ನಾನು ಹಿಂದಿನಿಂದಲೂ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಕುಟುಂಬ ರಾಜಕಾರಣದ ವಿರೋಧಿಯಾಗಿದ್ದು, ಈಗಲೂ ಅದನ್ನೇ ಮುಂದುವರಿಸು ತ್ತೇನೆ. 

ನಾನು ನನ್ನ  ಕಾರ್ಯಕರ್ತರನ್ನು ಉಳಿಸಬೇಕಿದೆ ಎಂದು ಹೇಳಿದ್ದಾರೆ. ಅರಕಲಗೂಡಿನ ಹನ್ಯಾಳು ಗ್ರಾಮದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಷ್ಟು ದಿನ ಗೌಡರನ್ನು ವಿರೋಧಿಸುತ್ತಾ ಈಗ ಅವರನ್ನು ಬೆಂಬಲಿಸುವುದರಲ್ಲಿ ಯಾವ ಅರ್ಥವಿದೆ ಎಂದು ಪ್ರಶ್ನಿಸಿದರು. 

ಮುಂದಿನ ಲೋಕಸಭಾ ಚುನಾವಣೆಯಲ್ಲಿ ಹಾಸನದಲ್ಲಿ ಕಾಂಗ್ರೆಸ್ ಅಭ್ಯರ್ಥಿಯನ್ನು ನಿಲ್ಲಿಸಲೇಬೇಕೆಂಬುದು ನನ್ನ ನಿಲುವು. ಹೈಕಮಾಂಡ್ ಜತೆಗೂ ಮಾತನಾಡಿದ್ದೇನೆ ಎಂದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ದ್ವೇಷ ಭಾಷಣ ತಡೆಗೆ ಕಾನೂನು ಯತ್ನ: ಕಾಂಗ್ರೆಸ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಆಕ್ರೋಶ
ದ್ವೇಷ ಭಾಷಣ ಶಾಸನ ಕಾಂಗ್ರೆಸ್ ಕ್ರೂರ ಸಂಪ್ರದಾಯದ ಪ್ರತಿಬಿಂಬ: ಪ್ರಲ್ಹಾದ್ ಜೋಶಿ ಕಿಡಿ