ನಾನೀಗ ಆರೋಪಮುಕ್ತ, ಧೈರ್ಯದಿಂದ ಟಿಕೆಟ್ ಕೇಳ್ತೀನಿ

Published : Aug 21, 2017, 03:33 PM ISTUpdated : Apr 11, 2018, 01:04 PM IST
ನಾನೀಗ ಆರೋಪಮುಕ್ತ, ಧೈರ್ಯದಿಂದ ಟಿಕೆಟ್ ಕೇಳ್ತೀನಿ

ಸಾರಾಂಶ

ನಾನೀಗ ಆರೋಪ ಮುಕ್ತನಾಗಿರುವುದರಿಂದ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಟಿಕೆಟ್ ಕೊಡುವಂತೆ ಧೈರ್ಯದಿಂದ ಕೇಳುತ್ತೇನೆ ಎಂದು ಹಾಲಪ್ಪ ತಿಳಿಸಿದರು.

ಮೈಸೂರು(ಆ.21): ನಾನೀಗ ಆರೋಪಮುಕ್ತನಾಗಿರುವುದರಿಂದ ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಟಿಕೆಟ್ ಕೊಡುವಂತೆ ಧೈರ್ಯದಿಂದ ಕೇಳುತ್ತೇನೆ ಎಂದು ಮಾಜಿ ಸಚಿವ ಹರತಾಳು ಹಾಲಪ್ಪ ತಿಳಿಸಿದ್ದಾರೆ.

ಅತ್ಯಾಚಾರ ಪ್ರಕರಣದಲ್ಲಿ ಕ್ಲೀನ್'ಚಿಟ್ ಪಡೆದಿರುವ ಹಿನ್ನೆಲೆಯಲ್ಲಿ ಹಾಲಪ್ಪ ದಂಪತಿ ಸುತ್ತೂರು ಮಠಕ್ಕೆ ಭೇಟಿ ನೀಡಿ ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮಿಗಳ ಆಶೀರ್ವಾದ ಪಡೆದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಡಿಯೂರಪ್ಪ ವಿರುದ್ಧ ರಾಜ್ಯ ಸರ್ಕಾರ ಎಸಿಬಿ ಅಸ್ತ್ರ ಪ್ರಯೋಗಿಸಿರುವುದು ರಾಜಕೀಯ ಪ್ರೇರಿತ, ಎಲ್ಲವನ್ನೂ ಸಮರ್ಥವಾಗಿ ಎದುರಿಸುತ್ತೇವೆ. ನಾನೀಗ ಆರೋಪ ಮುಕ್ತನಾಗಿರುವುದರಿಂದ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಟಿಕೆಟ್ ಕೊಡುವಂತೆ ಧೈರ್ಯದಿಂದ ಕೇಳುತ್ತೇನೆ ಎಂದು ಹಾಲಪ್ಪ ತಿಳಿಸಿದರು.

ಅತ್ಯಾಚಾರ ಪ್ರಕರಣದಲ್ಲಿ ಕಾಣದ ಕೈಗಳು ನನ್ನನ್ನು ಸಿಕ್ಕಿಸಿದ್ದವು. ಆ ಸಂದರ್ಭದಲ್ಲಿ ಶ್ರೀಗಳು ನನಗೆ ಧೈರ್ಯ ತುಂಬಿದ್ದರು. ಈಗ ಆರೋಪ ಮುಕ್ತನಾಗಿದ್ದು ಶ್ರೀಗಳ ಆಶೀರ್ವಾದ ಪಡೆಯುವುದಕ್ಕೆ ಬಂದಿದ್ದೆ ಎಂದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಗೃಹಲಕ್ಷ್ಮಿ ಫಲಾನುಭವಿಗಳಿಗೆ ಗುಡ್ ನ್ಯೂಸ್ ಕೊಟ್ಟ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್! ಖಾತೆಗೆ ಯಾವಾಗ ಬರುತ್ತೆ ಹಣ? ಇಲ್ಲಿದೆ ವಿವರ
ಪ್ರೀತಿ ವಿರೋಧಿಸಿದ ತಂದೆಯನ್ನು ಗೆಳೆಯನ ಜೊತೆ ಸೇರಿ ಮಸಣಕ್ಕೆ ಅಟ್ಟಿದ ಪಾಪಿ ಮಗಳು