'ಹೈಕಮಾಂಡ್‌ ಹೇಳಿದರೆ ಸಚಿವ ಸ್ಥಾನ ತ್ಯಜಿಸಲು ಸಿದ್ಧ'

Published : Jun 08, 2019, 08:22 AM IST
'ಹೈಕಮಾಂಡ್‌ ಹೇಳಿದರೆ ಸಚಿವ ಸ್ಥಾನ ತ್ಯಜಿಸಲು ಸಿದ್ಧ'

ಸಾರಾಂಶ

ಹೈ ಕಮಾಂಡ್ ಸೂಚನೆ ನಿಡಿದಲ್ಲಿ ತಾವು  ಸಚಿವ ಸ್ಥಾನ ತ್ಯಜಿಸಲು ಸಿದ್ಧ ಎಂದು ಕಾಂಗ್ರೆಸ್ ಸಚಿವರೋರ್ವರು ಹೇಳಿದ್ದಾರೆ. 

ಯಾದಗಿರಿ: ಕಾಂಗ್ರೆಸ್‌ ಹೈಕಮಾಂಡ್‌ ಸೂಚಿಸಿದರೆ ಸಚಿವ ಸ್ಥಾನ ತ್ಯಾಗಕ್ಕೆ ಸಿದ್ಧ ಎಂದು ಸಚಿವ ರಾಜಶೇಖರ ಪಾಟೀಲ್‌ ತಿಳಿಸಿದ್ದಾರೆ. ಯಾದಗಿರಿಯಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲೋಕಸಭೆ ಚುನಾವಣೆಯಲ್ಲಿನ ಹೀನಾಯ ಸೋಲಿನ ಬಗ್ಗೆ ಕಾಂಗ್ರೆಸ್‌ ಆತ್ಮಾವಲೋಕನ ಮಾಡಿಕೊಳ್ಳುತ್ತಿದೆ. ಈ ಬಗ್ಗೆ ಅವರನ್ನು, ಇವರನ್ನು ದೂರುವುದಿಲ್ಲ ಎಂದರು. ಪಕ್ಷ ಚುನಾವಣೆಯಲ್ಲಿ ಸೋತಿದೆ, ಇದಕ್ಕೆ ಕಾರಣಗಳೇನು, ಮುಂದೇನಾಗಬೇಕು ಎನ್ನುವುದನ್ನು ಪಕ್ಷದ ವಲಯದಲ್ಲಿ ಚರ್ಚೆ ನಡೆಸುತ್ತೇವೆ ಎಂದರು.

ವಿಪ್ರೋಗೆ ಭೂಮಿ ನೀಡಿರಲಿಲ್ಲವೆ:

ಜಿಂದಾಲ್‌ ಕಂಪನಿಗೆ ಬಳ್ಳಾರಿಯಲ್ಲಿ 3660 ಎಕರೆ ಭೂಮಿ ಪರಭಾರೆ ಕುರಿತು ಸರ್ಕಾರದಲ್ಲೇ ಅಪಸ್ವರಗಳ ಬಗ್ಗೆ ಪ್ರತಿಕ್ರಿಯಿಸಿದ ಸಚಿವ ರಾಜಶೇಖರ ಪಾಟೀಲ್‌, ಅಭಿವೃದ್ಧಿ ದೃಷ್ಟಿಕೋನದಲ್ಲಿ ಭೂಮಿ ನೀಡುವ ನಿರ್ಧಾರಕ್ಕೆ ಬರಲಾಗಿದೆ. ಅಷ್ಟಕ್ಕೂ, ಈ ಹಿಂದೆ ವಿಪ್ರೋಗೆ ಭೂಮಿ ನೀಡಿರಲಿಲ್ಲವೇ? ಅಭಿವೃದ್ಧಿ ಮುಂದುವರೆಯುತ್ತಿರಬೇಕು ಎಂದು ತಿಳಿಸಿದರು.

ಅತೃಪ್ತರಿಗೆ ಸಚಿವ ಸ್ಥಾನ ನೀಡಿ ರಾಜ್ಯ ಸಮ್ಮಿಶ್ರ ಸರ್ಕಾರದಲ್ಲಿನ ಬಂಡಾಯ ಶಮನಕ್ಕೆ ಅತೃಪ್ತರಿಗೆ ಸಚಿವ ಸ್ಥಾನ ನೀಡುವ ಸಮಾಧಾನ ಪಡಿಸುವ ಬಗ್ಗೆ ಮಾತುಗಳು ತೇಲಿಬರುತ್ತಿರುವ ಹಿನ್ನೆಲೆಯಲ್ಲಿ, ತಮ್ಮ ಸಚಿವ ಸ್ಥಾನ ತಲೆದಂಡ ಬಯಸಿದರೆ ಹೇಗೆ ಅನ್ನೋ ಪ್ರಶ್ನೆಗೆ ಸಚಿವ ರಾಜಶೇಖರ ಪಾಟೀಲ್‌ ಈ ರೀತಿಯಾಗಿ ಪ್ರತಿಕ್ರಿಯಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

'ಒಂದು-ಎರಡು ಬಣಗಳೆರಡು..' ಹಾಡಿನ ಮೂಲಕ ಸರ್ಕಾರದ ಕಾಲೆಳೆದ ಅಭಯ್ ಪಾಟೀಲ್
ಎರಡು ತಿಂಗಳು ಇಂಟರ್ನ್‌ಶಿಪ್ ಮಾಡುವವರಿಗೆ 4 ಲಕ್ಷ ಸ್ಟೈಫಂಡ್ ಕೊಡುತ್ತದೆ ಈ ಕಾಲೇಜು