ಕುಮಾರಸ್ವಾಮಿ ಬಾಯಲ್ಲಿ ರಾಜಕೀಯ ನಿವೃತ್ತಿ ಮಾತು: ಏನಂದ್ರು ಕೇಳಿ..?

Published : Aug 03, 2019, 10:17 PM ISTUpdated : Aug 03, 2019, 10:31 PM IST
ಕುಮಾರಸ್ವಾಮಿ ಬಾಯಲ್ಲಿ ರಾಜಕೀಯ ನಿವೃತ್ತಿ ಮಾತು: ಏನಂದ್ರು ಕೇಳಿ..?

ಸಾರಾಂಶ

ಲೋಕಸಭೆ ಚುನಾವಣೆಯಲ್ಲಿ ಪುತ್ರನ ಸೋಲು ಹಾಗೂ ಸಿಎಂ ಕುರ್ಚಿ ಕಳೆದುಕೊಂಡು ಸೈಲೆಂಟ್ ಮೂಡ್ ನಲ್ಲಿರುವ ಮಾಜಿ ಮುಖ್ಯಮಂತ್ರಿ ಎಚ್. ಡಿ ಕುಮಾರಸ್ವಾಮಿ, ರಾಜಕೀಯ ನಿವೃತ್ತಿ ಮಾತನ್ನಾಡಿದ್ದಾರೆ. ಹಾಗಾದ್ರೆ ಎಚ್ ಡಿಕೆ ಏನೆಲ್ಲ ಮಾತನಾಡಿದ್ದಾರೆ ಮುಂದೆ ಓದಿ...

ಹಾಸನ, (ಆ.03): ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಅವರು ಇಂದು [ಶನಿವಾರ] ಹಾಸನಕ್ಕೆ ಭೇಟಿ ಕೊಟ್ಟಿದ್ದಾರೆ. ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿರುವ ವೇಳೆ ಎಚ್ ಡಿಕೆ ಬಾಯಲ್ಲಿ ರಾಜಕೀಯ ನಿವೃತ್ತಿಯ ಮಾತುಗಳು ಬಂದಿವೆ.

'ಜಾತಿ ಪ್ರಭಾವದಿಂದ ರಾಜಕೀಯ ನಡೆಯುತ್ತಿದೆ. ಇಂದಿನ ರಾಜಕೀಯ ವ್ಯವಸ್ಥೆಯಲ್ಲಿ ಒಳ್ಳೆಯವರಿಗೆ ಕಾಲವಿಲ್ಲ. ನನಗೆ ರಾಜಕೀಯದಲ್ಲಿ ಮುಂದುವರಿಯಬೇಕೆಂಬ ಹುಚ್ಚಿಲ್ಲ. ರಾಜಕೀಯದಿಂದ ನಾನೇ ಹಿಂದಕ್ಕೆ ಸರಿಯಬೇಕು ಎಂದುಕೊಂಡಿದ್ದೇನೆ' ಎಂದು ಹೇಳಿದರು.

ನಾನು ಆಕಸ್ಮಿಕವಾಗಿ ಮುಖ್ಯಮಂತ್ರಿಯಾದವನು. ದೇವರು ಕೊಟ್ಟ ಆಶೀರ್ವಾದಿಂದ ಎರಡು ಬಾರಿ ಮುಖ್ಯಮಂತ್ರಿಯಾಗಿದ್ದೇನೆ. ಸಿಎಂ ಸ್ಥಾನದಲ್ಲಿ ಕುಳಿತು ಮಾಡಿದ ಕೆಲಸಗಳ ಬಗ್ಗೆ ತೃಪ್ತಿ ಇದೆ ಎಂದರು.

ರಾಜಕೀಯದಲ್ಲಿ ನಾನೇನು ಗೂಟ ಹೊಡೆದುಕೊಂಡು ಕೂರುವುದಿಲ್ಲ. ಈ ಹಿಂದೆಯೇ ರಾಜಕೀಯದಿಂದ ನಿವೃತ್ತಿಯಾಗಿವ ಚಿಂತನೆ ಮಾಡಿದ್ದೆ. ನನಗೆ ಮುಖ್ಯಮಂತ್ರಿ ಹುದ್ದೆ ಮೇಲೆ ವ್ಯಾಮೋಹವಿಲ್ಲ. ನನಗೆ ಬೇಕಿರುವುದು ನಾಡಿನ ಜನರ ಹೃದಯದಲ್ಲಿ ಸ್ಥಾನ ಮಾತ್ರ ನಯವಾಗಿ ಹೇಳಿದರು.

 ಎಚ್ ಡಿಕೆ ರಾಜಕೀಯ ನಿವೃತ್ತಿಯ ಮಾತುಗಳನ್ನಾಡಿದ್ದು ಇದೇನು ಮೊದಲಲ್ಲ. ಈ ಹಿಂದೆಯೂ ಬಿಜೆಪಿ ಹಾಗೂ ಜೆಡಿಎಸ್ 20-20 ಸರ್ಕಾರ ಪತನಗೊಂಡಾಗಲೂ ರಾಜಕೀಯ ನಿವೃತ್ತಿಗೆ ಚಿಂತನೆ ನಡೆಸಿದ್ದೆ ಎಂದು ಇತ್ತೀಚೆಗೆ ಹೇಳಿದ್ದನ್ನು ಇಲ್ಲಿ ಸ್ಮರಿಸಬಹುದು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಅಂಡಮಾನ್‌ ದ್ವೀಪದಲ್ಲಿ ಸಾವರ್ಕರ್ ಪ್ರತಿಮೆ ಅನಾವರಣ
ವಿಡಿಯೋ: ಅಂತರರಾಷ್ಟ್ರೀಯ ವೇದಿಕೆಯಲ್ಲಿ ಪಾಕಿಸ್ತಾನಕ್ಕೆ ಅವಮಾನ: ಶಹಬಾಜ್ ಷರೀಫ್‌ರನ್ನು ನಿರ್ಲಕ್ಷಿಸಿದ ಪುಟಿನ್!