IMA ಜುವೆಲರ್ಸ್ ಪ್ರಕರಣ: ಕಂಪನಿಯ 7 ನಿರ್ದೇಶಕರು ಪೊಲೀಸರ ಮುಂದೆ ಶರಣು

Published : Jun 12, 2019, 06:39 PM ISTUpdated : Jun 12, 2019, 06:49 PM IST
IMA ಜುವೆಲರ್ಸ್ ಪ್ರಕರಣ:  ಕಂಪನಿಯ 7 ನಿರ್ದೇಶಕರು ಪೊಲೀಸರ ಮುಂದೆ ಶರಣು

ಸಾರಾಂಶ

ಐಎಂಎ ಮಹಾ ವಂಚನೆ ಪ್ರಕರಣ, ಫೀಲ್ಡಿಗಿಳಿದ ಪೊಲೀಸರು| ಪೂರ್ವ ವಿಭಾಗದ ಪೊಲೀಸರ ಮುಂದೆ ಶರಣಾದ ಐಎಂಎ ಕಂಪನಿ ನಿರ್ದೇಶಕರು| ಶರಣಾದ ಆರೋಪಿಗಳನ್ನ ಬಂಧನಕ್ಕೊಳಪಡಿಸಿ ವಿಚಾರಣೆ ನಡೆಸುತ್ತಿರುವ ಪೊಲೀಸರು| ಏಳು ಆರೋಪಿಗಳನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಲಿರುವ ಪೊಲೀಸರು

ಬೆಂಗಳೂರು, [ಜೂನ್.12]: IMA ಜುವೆಲರ್ಸ್ ಬಹುಕೋಟಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಂಪನಿಯ 7 ಮಂದಿ ನಿರ್ದೇಶಕರು ಪೊಲೀಸರ ಮುಂದೆ ಶರಣಾಗಿದ್ದಾರೆ.

ಇಂದು [ಬುಧವಾರ] ಸಂಜೆ ಬೆಂಗಳೂರು ಪೂರ್ವ ವಿಭಾಗದ ಪೊಲೀಸರ ಮುಂದೆ ಐಎಂಎ ಕಂಪನಿಯ ಏಳು ನಿರ್ದೇಶಕರು ಶರಣಾಗಿದ್ದಾರೆ. ನಿಜಾಮುದ್ದೀನ್, ನಾಸಿರ್ ಹುಸೇನ್, ನವೀದ್ ಅಹ್ಮದ್, ಅರ್ಶದ್ ಖಾನ್, ವಾಸಿಮ್, ಅನ್ಸರ್ ಪಾಷಾ, ದಾದಾ ಪೀರ್ ಶರಣಾದ ಆರೋಪಿಗಳು.

ಶರಣಾದ ಆರೋಪಿಗಳನ್ನು ಬಂಧನಕ್ಕೊಳಪಡಿಸಿರುವ ಪೊಲೀಸರು ವಿಚಾರಣೆ ನಡೆಸುತ್ತಿದ್ದು, ಬಳಿಕ  4ನೇ ಎಸಿಎಂಎಂ ನ್ಯಾಯಲಯದ ನ್ಯಾಯಧೀಶರ ಮುಂದೆ ಹಾಜರುಪಡಿಸಲಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಆದರೆ, ಐಎಂಎ ಮಾಲೀಕ ಮನ್ಸೂರ್ ಖಾನ್ ನಾಪತ್ತೆಯಾಗಿದ್ದಾನೆ. ಇನ್ನು ಈ ಪ್ರಕರಣವನ್ನು ರಾಜ್ಯ ಸರ್ಕಾರ ಸಿಐಟಿ ತಿನಿಖೆ ವಹಿಸಿದ್ದು, ಈಗಾಗಲೇ ತನಿಖಾ ತಂಡವು ಸಹ ರಚನೆಯಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಇಂಟರ್ನೆಟ್ ಇಲ್ಲದೆಯೂ UPI ಪಾವತಿ ಮಾಡಬಹುದು, *99# ಮೂಲಕ ಹಣ ಕಳುಹಿಸುವುದು ಹೇಗೆ?
ಸಿಎಂ, ಡಿಸಿಎಂ ನಡುವೆ ಬೂದಿ ಮುಚ್ಚಿದ ಕೆಂಡದ ಪರಿಸ್ಥಿತಿ: ಸಂಸದ ಜಗದೀಶ್ ಶೆಟ್ಟರ್