
ಬೆಂಗಳೂರು [ಜು.31]: ಇನ್ನು ಐಎಂಎ ವಂಚನೆ ಪ್ರಕರಣದಲ್ಲಿ ಶಾಸಕರಾದ ರೋಷನ್ ಬೇಗ್ ಮತ್ತು ಜಮೀರ್ ಅಹಮ್ಮದ್ ಖಾನ್ ಅವರು ಬುಧವಾರ ವಿಚಾರಣೆಗೆ ಹಾಜರಾಗುವ ಸಾಧ್ಯತೆ ಇದೆ.
ಜು.31ರಂದು ಸ್ಪೀಕರ್ ಅವರ ಚುನಾವಣೆ ಇರುವುದರಿಂದ ಇಬ್ಬರು ಶಾಸಕರು ಅಧಿವೇಶನದಲ್ಲಿ ಪಾಲ್ಗೊಳ್ಳುವ ಸಾಧ್ಯತೆ ಇದೆ. ಆದರೆ ವಿಚಾರಣೆಯಿಂದ ವಿನಾಯಿತಿ ನೀಡುವಂತೆ ಇಬ್ಬರು ಶಾಸಕರು ಎಸ್ಐಟಿಯನ್ನು ಕೇಳಿಲ್ಲ. ಒಂದೊಮ್ಮೆ ಪತ್ರದ ಮೂಲಕ ವಿಚಾರಣೆಗೆ ಮತ್ತೊಂದು ದಿನ ಕಾಲವಕಾಶ ಕೇಳಿದರೆ, ಅವಕಾಶ ನೀಡಲಾಗುವುದು ಎಂದು ಎಸ್ಐಟಿ ಅಧಿಕಾರಿಗಳು ಹೇಳಿದ್ದಾರೆ.
ಮೊದಲು ಇಬ್ಬರು ಶಾಸಕರಿಗೆ ಜು.29ರಂದು ವಿಚಾರಣೆಗೆ ಹಾಜರಾಗುವಂತೆ ಎಸ್ಐಟಿ ಅಧಿಕಾರಿಗಳು ನೋಟಿಸ್ ನೀಡಿದ್ದರು. ಆದರೆ ಜು.29ರಂದೇ ನೂತನ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ವಿಶ್ವಾಸ ಮತಯಾಚನೆ ಹಿನ್ನೆಲೆಯಲ್ಲಿ ಇಬ್ಬರು ಶಾಸಕರಿಗೆ ಜು.31ರಂದು ಹಾಜರಾಗುವಂತೆ ಎಸ್ಐಟಿ ಮತ್ತೊಂದು ನೋಟಿಸ್ ನೀಡಿತ್ತು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.