ಕರ್ನಾಟಕದ ರೈತರಿಗೆ ಸಂತಸದ ಸುದ್ದಿ ನೀಡಿದ ಐಎಂಡಿ, ಈ ವರ್ಷ ಸಾಮಾನ್ಯಕ್ಕಿಂತ ಹೆಚ್ಚಿನ ಮಾನ್ಸೂನ್‌!

Published : Apr 15, 2025, 04:42 PM ISTUpdated : Apr 15, 2025, 04:55 PM IST
ಕರ್ನಾಟಕದ ರೈತರಿಗೆ ಸಂತಸದ ಸುದ್ದಿ ನೀಡಿದ ಐಎಂಡಿ, ಈ ವರ್ಷ ಸಾಮಾನ್ಯಕ್ಕಿಂತ ಹೆಚ್ಚಿನ ಮಾನ್ಸೂನ್‌!

ಸಾರಾಂಶ

ಭಾರತೀಯ ಹವಾಮಾನ ಇಲಾಖೆಯ ಪ್ರಕಾರ, 2025ರಲ್ಲಿ ದೇಶದಲ್ಲಿ ಸಾಮಾನ್ಯಕ್ಕಿಂತ ಹೆಚ್ಚಿನ ಮಾನ್ಸೂನ್ ಮಳೆಯಾಗುವ ಸಾಧ್ಯತೆ ಇದೆ. ಇದು ದೀರ್ಘಾವಧಿಯ ಸರಾಸರಿ 105% ಆಗಿರಬಹುದು. ಕರ್ನಾಟಕದಲ್ಲಿ ಕರಾವಳಿಯಲ್ಲಿ ಹೆಚ್ಚಿನ ಮಳೆ, ದಕ್ಷಿಣ ಒಳನಾಡಿನಲ್ಲಿ ಸಾಮಾನ್ಯ ಮಳೆ, ಮತ್ತು ಉತ್ತರ ಒಳನಾಡಿನಲ್ಲಿ ಸಾಮಾನ್ಯಕ್ಕಿಂತ ಹೆಚ್ಚು ಮಳೆಯಾಗುವ ನಿರೀಕ್ಷೆಯಿದೆ. ಮೇ ತಿಂಗಳ ಕೊನೆಯಲ್ಲಿ ಮತ್ತಷ್ಟು ನಿಖರ ಮುನ್ಸೂಚನೆ ನೀಡಲಾಗುವುದು.

ನವದೆಹಲಿ (ಏ.15): ದೇಶದ ರೈತರು ಹಾಗೂ ಕೃಷಿ ವಲಯಕ್ಕೆ ಖುಷಿ ನೀಡುವಂಥ ವಿಚಾರವನ್ನು ಭಾರತೀಯ ಹವಾಮಾನ ಇಲಾಖೆ ನೀಡಿದೆ. 2025 ರಲ್ಲಿ ಸಾಮಾನ್ಯಕ್ಕಿಂತ ಹೆಚ್ಚಿನ ಮಾನ್ಸೂನ್ ಮಳೆಯಾಗಲಿದೆ ಎಂದು ಭಾರತ ಹವಾಮಾನ ಇಲಾಖೆ (ಐಎಂಡಿ) ಮುನ್ಸೂಚನೆ ನೀಡಿದೆ.

ದೇಶಾದ್ಯಂತ ಮಾನ್ಸೂನ್ ಮಳೆ (ಜೂನ್-ಸೆಪ್ಟೆಂಬರ್) ದೀರ್ಘಾವಧಿಯ ಸರಾಸರಿ (LPA) ಯ 105% ಆಗಿದ್ದು, ಇದು 87 ಸೆಂ.ಮೀ. ಆಗಿದ್ದು, +/-5% ಮಾದರಿ ದೋಷದೊಂದಿಗೆ ಇರುತ್ತದೆ ಎಂದು ಹವಾಮಾನ ಇಲಾಖೆ ತನ್ನ ಮೊದಲ ಅಂದಾಜಿನಲ್ಲಿ ತಿಳಿಸಿದೆ.

"2025 ರಲ್ಲಿ ದೇಶಾದ್ಯಂತ ನೈಋತ್ಯ ಮಾನ್ಸೂನ್ ಋತುಮಾನದ (ಜೂನ್ ನಿಂದ ಸೆಪ್ಟೆಂಬರ್) ಮಳೆಯು ಸಾಮಾನ್ಯಕ್ಕಿಂತ ಹೆಚ್ಚಾಗಿರುತ್ತದೆ (> ದೀರ್ಘಾವಧಿಯ ಸರಾಸರಿ (LPA) ಯ 104%). ಪರಿಮಾಣಾತ್ಮಕವಾಗಿ, ದೇಶಾದ್ಯಂತ ಋತುಮಾನದ ಮಳೆಯು LPA ಯ 105% ಆಗಿದ್ದು, ಮಾದರಿ ದೋಷ ± 5% ರಷ್ಟಿದೆ" ಎಂದು ಐಎಂಡಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.

ದೇಶದ ಹೆಚ್ಚಿನ ಭಾಗಗಳಲ್ಲಿ ಸಾಮಾನ್ಯ ಅಥವಾ ಸಾಮಾನ್ಯಕ್ಕಿಂತ ಹೆಚ್ಚಿನ ಮಾನ್ಸೂನ್ ಮಳೆಯಾಗುವ ನಿರೀಕ್ಷೆಯಿದೆ ಎಂದು ಐಎಂಡಿ ತಿಳಿಸಿದೆ, ಇದು ದೀರ್ಘಾವಧಿಯ ಸರಾಸರಿಯ 96-105% ವ್ಯಾಪ್ತಿಯಲ್ಲಿ ಬರುತ್ತದೆ.

"ಮುನ್ಸೂಚನೆಯ ಪ್ರಕಾರ, ಮಾನ್ಸೂನ್ ಋತುವಿನಲ್ಲಿ ತಟಸ್ಥ ಎಲ್ ನಿನೋ-ಸದರ್ನ್ ಆಸಿಲೇಷನ್ (ENSO) ಪರಿಸ್ಥಿತಿಗಳು ಮುಂದುವರಿಯುವ ಸಾಧ್ಯತೆಯಿದೆ" ಎಂದು ಐಎಂಡಿಯ ಡಿಜಿಎಂ ಎಂ ಮೊಹಾಪಾತ್ರ ಹೇಳಿದರು. ನೈಋತ್ಯ ಮಾನ್ಸೂನ್ ಋತುವಿನಲ್ಲಿ ತಟಸ್ಥ ಹಿಂದೂ ಮಹಾಸಾಗರದ ದ್ವಿಧ್ರುವಿ (IOD) ಪರಿಸ್ಥಿತಿಗಳನ್ನು IMD ಮುನ್ಸೂಚನೆ ನೀಡಿದೆ. 2025 ರ ಮೇ ಕೊನೆಯ ವಾರದಲ್ಲಿ ಮಾನ್ಸೂನ್ ಋತುವಿನ ಮಳೆಯ ಅಪ್‌ಡೇಟ್‌ ಮುನ್ಸೂಚನೆಗಳನ್ನು IMD ನೀಡಲಿದೆ.

ಕರ್ನಾಟಕದಲ್ಲಿ ಹೇಗಿರಲಿದೆ ಮಾನ್ಸೂನ್‌: ಕರ್ನಾಟಕದಲ್ಲಿ ಜೂನ್‌ನಿಂದ ಸೆಪ್ಟೆಂಬರ್‌ವರೆಗೆ ಉತ್ತಮ ಮಳೆಯಾಗಲಿದೆ ಎಂದು ಐಎಂಡಿ ಅಂದಾಜಿಸಿದೆ. ಕರಾವಳಿ ಕರ್ನಾಟಕದಲ್ಲಿ ಸಾಮಾನ್ಯಕ್ಕಿಂತ ಹೆಚ್ಚಿನ ಪ್ರಮಾಣದಲ್ಲಿ ಮಳೆಯಾಗಲಿದ್ದರೆ, ದಕ್ಷಿಣ ಒಳನಾಡಿನಲ್ಲಿ ಸಾಮಾನ್ಯಕ್ಕಿಂತ ಕಡಿಮೆ ಹಾಗೂ ಸಾಮಾನ್ಯಕ್ಕಿಂತ ಹೆಚ್ಚಿನ ನಡುವಿನ ಮಳೆಯಾಗಲಿದೆ. ಉತ್ತರ ಒಳನಾಡಿನಲ್ಲಿ ಸಾಮಾನ್ಯಕ್ಕಿಂತ ಹೆಚ್ಚಿನ ಮಳೆಯಾಗಲಿದೆ ಎಂದು ತಿಳಿಸಿದೆ.

ರಾಜ್ಯದಲ್ಲಿ ಇನ್ನೂ 1 ವಾರ ಮಳೆ ಸಾಧ್ಯತೆ; ಏಪ್ರಿಲ್ 17, 18ಕ್ಕೆ ಹೆಚ್ಚಿನ ಮಳೆಯ ನಿರೀಕ್ಷೆ

ಕರ್ನಾಟಕದ ಪ್ರಮುಖ ಮಾನ್ಸೂನ್ ಸ್ಥಳಗಳಲ್ಲಿ ಎಂದಿನಂತೆ ಮಳೆಯಾಗುವ ಸಾಧ್ಯತೆ ಇದ್ದು, ಜೂನ್‌ನಲ್ಲಿ ಸಾಮಾನ್ಯಕ್ಕಿಂತ ಕಡಿಮೆ, ಜುಲೈನಲ್ಲಿ ಸಾಮಾನ್ಯಕ್ಕಿಂತ ಹೆಚ್ಚು ಹಾಗೂ ಆಗಸ್ಟ್‌ನಲ್ಲಿ ಸಾಮಾನ್ಯಕ್ಕಿಂತ ಹೆಚ್ಚು ಮಳೆಯಾಗಲಿದೆ.

ಮುಂಗಾರುಪೂರ್ವ ಮಳೆ ಅರ್ಭಟ ಜೋರು: ಸಿಡಿಲಿನ ಹೊಡೆತ ತಪ್ಪಿಸಲು ಹವಾಮಾನ ಇಲಾಖೆ ನೀಡಿರುವ ಈ ಸಲಹೆ ಪಾಲಿಸಿ!

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ವೈದ್ಯಾಧಿಕಾರಿಯಿಂದ ನರ್ಸ್‌ಗೆ ನಿರಂತರ ಕಿರುಕುಳ, ಆಸ್ಪತ್ರೆಯಲ್ಲೇ 20ಕ್ಕೂ ಹೆಚ್ಚು ನಿದ್ರೆ ಮಾತ್ರೆ ಸೇವಿಸಿ ಆತ್ಮ*ಹತ್ಯೆ ಯತ್ನ!
2 ಮಕ್ಕಳಾದ ನಂತರವು ಮುಸ್ಲಿಂ ಸೊಸೆಯ ಒಪ್ಪಿಕೊಳ್ಳದ ಪೋಷಕರು: ವಿಚ್ಛೇದನ ನೀಡಲು ಮುಂದಾದ ಮಗನಿಂದ ಆಯ್ತು ಘೋರ ಅಪರಾಧ