
ನವದೆಹಲಿ : ಈಗಾಗಲೇ ಅಂಡಮಾನ್ ಸಮುದ್ರಕ್ಕೆ ಅಪ್ಪಳಿಸಿರುವ ‘ಪಬುಕ್’ ಚಂಡಮಾರುತವು ಪ್ರತೀ ಗಂಟೆಗೆ 21 ಕಿ.ಮೀ ವೇಗವಾಗಿ ಪಶ್ಚಿಮ ವಾಯುವ್ಯ ದಿಕ್ಕಿನಲ್ಲಿ ಚಲಿಸುತ್ತಿದೆ. ಹೀಗಾಗಿ, ಈ ಭಾಗದಲ್ಲಿ ಮೀನುಗಾರರು ಸಮುದ್ರದ ದಡಕ್ಕೆ ತೆರಳದಂತೆ ಭಾರತೀಯ ಹವಾಮಾನ ಇಲಾಖೆ ಎಚ್ಚರಕೆ ನೀಡಿದೆ.
ಈ ಬಗ್ಗೆ ಶನಿವಾರ ಮುನ್ನೆಚ್ಚರಿಕೆ ನೀಡಿರುವ ಹವಾಮಾನ ಇಲಾಖೆ, ‘ಮುಂದಿನ ಕೆಲವು ಗಂಟೆಗಳ ಕಾಲ ಪಶ್ಚಿಮ ವಾಯುವ್ಯ ದಿಕ್ಕಿನಲ್ಲೇ ಪಬುಕ್ ಚಂಡ ಮಾರುತ ಚಲಿಸಲಿದೆ.
ಆ ನಂತರ ಭಾನುವಾರ ಈ ಚಂಡಮಾರುತವು ಪ್ರತೀ ಗಂಟೆಗೆ 80ರಿಂದ 90 ಕಿ.ಮೀ ವೇಗವಾಗಿ ಚಲಿಸಲಿದೆ. ಈ ವೇಳೆ ಅಂಡಮಾನ್ ದ್ವೀಪ ಪ್ರದೇಶ ಸೇರಿದಂತೆ ಇತರ ಭಾಗಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಸೋಮವಾರ ಮತ್ತು ಮಂಗಳವಾರ ಉತ್ತರ ವಾಯುವ್ಯ ದಿಕ್ಕಿನತ್ತ ಅಂದರೆ, ಮ್ಯಾನ್ಮಾರ್ ಕರಾವಳಿಯತ್ತ ಚಲಿಸಲಿದೆ,’ ಎಂದು ಹೇಳಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.