
ಬೆಂಗಳೂರು : ಮಳೆಗಾಲದಲ್ಲಿ ಭೀಕರ ಪ್ರವಾಹ ಎದುರಾಗಿ ಜನರು ತತ್ತರಿಸಿದ್ದ ಬೆನ್ನಲ್ಲೇ ಹವಮಾನ ಇಲಾಖೆ ಇದೀಗ ಮತ್ತೊಂದು ಶಾಕ್ ನೀಡಿದೆ.
ಈ ಬಾರಿ ಹಳೆಯ ರೆಕಾರ್ಡ್ ಗಳನ್ನೆಲ್ಲಾ ಬ್ರೇಕ್ ಮಾಡುವ ಪ್ರಮಾಣದಲ್ಲಿ ಬಿಸಿಲು ಇರಲಿದೆ. ಆದ್ದರಿಂದ ಜನತೆ ಭಯಂಕರ ಬಿಸಲು ಎದುರಿಸಲು ಸಜ್ಜಾಗಿ ಎಂದು ಅಲರ್ಟ್ ಮಾಡಿದೆ.
ಈಗಾಗಲೇ ಕೇಂದ್ರ ಹವಾಮಾನ ಇಲಾಖೆ ತಮಿಳುನಾಡಿಗೆ ಹೀಟ್ ವೇವ್ ಅಲರ್ಟ್ ನೀಡಿದ್ದು, ಎಚ್ಚರದಿಂದ ಇರುವಂತೆ ಸೂಚನೆ ನೀಡಿದೆ.
ಈ ನಿಟ್ಟಿನಲ್ಲಿ ಕರ್ನಾಟಕಕ್ಕೂ ರಣಬಿಸಿಲು ತಟ್ಟುವ ಸಾಧ್ಯತೆ ಇದೆ. ಫೆಬ್ರುವರಿ ಹಾಗೂ ಮಾರ್ಚ್ ತಿಂಗಳಲ್ಲಿ ವಾಡಿಕೆಗಿಂತ ಹೆಚ್ಚು ಬಿಸಿಲು ಕಾಣಿಸಿಕೊಂಡಿದ್ದು, ಬೆಂಗಳೂರಿನಲ್ಲಿ ಮಾರ್ಚ್ ಮೊದಲ ವಾರದಲ್ಲೇ 37° ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದೆ.
ಉತ್ತರ ಕರ್ನಾಟಕ , ಕರಾವಳಿ ಭಾಗದಲ್ಲಿ ಫೆಬ್ರುವರಿ, ಮಾರ್ಚ್ ತಿಂಗಳಲ್ಲಿ ವಾಡಿಕೆಗಿಂತ ಹೆಚ್ಚು ಬಿಸಲು ಕಾಣಿಸಿಕೊಂಡಿದ್ದು, ಮುಂದಿನ ದಿನಗಳಲ್ಲಿ ಭಾರಿ ಬಿಸಿಲು ಹೆಚ್ಚಳವಾಗುವ ಸಾಧ್ಯತೆ ಇದೆ.
ಈ ಬಾರಿ ಬೇಸಿಗೆಯಲ್ಲಿ ಸಾಮಾನ್ಯ ಉಷ್ಣಾಂಶಕ್ಕಿಂತ ಎರಡರಿಂದ ಮೂರು ಡಿಗ್ರಿ ಉಷ್ಣಾಂಶ ಹೆಚ್ಚಾಗುವ ಮುನ್ಸೂಚನೆಯನ್ನೂ ಕೇಂದ್ರ ಹವಾಮಾನ ಇಲಾಖೆ ನೀಡಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.