
ಬೆಂಗಳೂರು(ಅ.11): ಬೀದಿ ನಾಯಿಗಳ ಹಿಡಿಯುವ ನೆಪದಲ್ಲಿ ಬಿಬಿಎಂಪಿಯಲ್ಲಿ ಕೋಟಿ-ಕೋಟಿ ಹಣ ಲೂಟಿ ಮಾಡ್ತಿರುವ ಪ್ರಕರಣ ಕುರಿತಂತೆ ಸುವರ್ಣ ನ್ಯೂಸ್ 'ವರದಿಯಿಂದ ಸರ್ಕಾರ ಎಚ್ಚೆತ್ತುಕೊಂಡಿದೆ. ಈ ಸಂಬಂಧ ನಿನ್ನೆ ಮೇಯರ್ ಸಂಪತ್ ರಾಜ್ ಪಾಲಿಕೆಯ ಅಧಿಕಾರಿಗಳ ಸಭೆ ನಡೆಸಿದ್ದಾರೆ.
ಈ ಸಂದರ್ಭದಲ್ಲಿ ನಗರದಲ್ಲಿ ಬೀದಿ ನಾಯಿಗಳನ್ನು ಹಿಡಿದಿರುವ ಸಂಖ್ಯೆ, ಖರ್ಚು ಮಾಡಿರುವ ಹಣದ ಸಮಗ್ರ ಮಾಹಿತಿ ನೀಡುವಂತೆ ಮೇಯರ್ ಸೂಚನೆ ನೀಡಿದ್ದಾರೆ. ಮೂರು ದಿನದಲ್ಲಿ ಸಂಪೂರ್ಣ ಡಿಟೇಲ್ಸ್ ಇರಬೇಕೆಂದು ಕಟ್ಟು ನಿಟ್ಟಿನ ಸೂಚನೆ ನೀಡಿರುವ ಮೇಯರ್ ನಾಯಿ ಹಿಡಿಯುವ ಹೆಸರಿನಲ್ಲಿ ಗುತ್ತಿಗೆದಾರರು ಹಾಗೂ ಅಧಿಕಾರಿಗಳು ನೀಡಿರುವ ಬೋಗಸ್ ಲೆಕ್ಕ ಹಾಗೂ ಶಸ್ತ್ರ ಚಿಕಿತ್ಸೆ ಹೆಸ್ರಲ್ಲಿ ನಡೆಯುತ್ತಿರುವ ಮಹಾ ಮೋಸದ ಪತ್ತೆಗೆ ಮುಂದಾಗಿದ್ದಾರೆ.
ಈ ಬಗ್ಗೆ ಸುವರ್ಣ ನ್ಯೂಸ್ ನಗರದ ವಿವಿಧ ಭಾಗದಲ್ಲಿ ರಿಯಾಲಿಟಿ ಚೆಕ್ ಮಾಡಿತ್ತು. ಆ ವೇಳೆ ನಾಯಿ ಹಿಡಿಯುವ ಹೆಸ್ರಲ್ಲಿ ಬಹುಕೋಟಿ ಹಗರಣ ಪಾಲಿಕೆಯಲ್ಲಿ ನಡೆಯುತ್ತಿರುವ ಬಗ್ಗೆ ವರದಿ ಮಾಡಿತ್ತು.ವರದಿ ಫಲಶೃತಿಯಂತೆ ಮೇಯರ್ ಲೆಕ್ಕ ತರಿಸಿಕೊಳ್ಳಲು ಮುಂದಾಗಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.