
ನವದೆಹಲಿ: ಮೂರು ಮಕ್ಕಳನ್ನು ಹೊಂದಿರುವ ವ್ಯಕ್ತಿ ಪಂಚಾಯತ್ ಚುನಾವಣೆಯಲ್ಲಿ ಸ್ಪರ್ಧಿಸುವುದರಿಂದ ಹಾಗೂ ಪಂಚಾಯತ್ ಸದಸ್ಯನಾಗಿರುವುದರಿಂದ ಅನರ್ಹ ಗೊಳ್ಳುತ್ತಾನೆ ಎಂದು ಸುಪ್ರೀಂಕೋರ್ಟ್ ತೀರ್ಪು ನೀಡಿದೆ.
ಒಡಿಶಾ ಗ್ರಾಮ ಪಂಚಾಯ್ತಿಗಳಿಗೆ ಈ ತೀರ್ಪು ಅನ್ವಯ ವಾಗಲಿದೆ. ಮೂರನೇ ಮಗು ಜನಿಸಿದ ಕಾರಣಕ್ಕೆ ಒಡಿಶಾದ ನುವಾಪಾಡಾ ಜಿಲ್ಲೆಯ ಪಂಚಾಯತ್ವೊಂದ ರಿಂದ ತಮ್ಮನ್ನು ಅನರ್ಹಗೊಳಿಸಿದ ಒಡಿಶಾ ಹೈಕೋರ್ಟ್ ನಿರ್ಧಾರ ಪ್ರಶ್ನಿಸಿ ಮೀನಾ ಸಿಂಗ್ ಮಾಂಝಿ ಎನ್ನುವವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ಒಡಿಶಾ ಪಂಚಾಯತರಾಜ್ ಕಾಯ್ದೆಯನ್ವಯ ಈ ತೀರ್ಪು ನೀಡಿದೆ.
ಇದೇ ವೇಳೆ, ಪಂಚಾಯತ್ ಸದಸ್ಯತ್ವವನ್ನು ಉಳಿಸಿಕೊಳ್ಳಲು 3 ರಲ್ಲಿ 1 ಮಗುವನ್ನು ದತ್ತು ನೀಡಿದರೂ ಪಂಚಾಯತ್ ರಾಜ್ ಕಾಯ್ದೆಯ ಪ್ರಕಾರ ಅನರ್ಹರಾಗಲಿದ್ದಾರೆ ಎಂದು ಕೋರ್ಟ್ ಹೇಳಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.