
ಬೆಂಗಳೂರು (ಅ.04): ತಮಿಳುನಾಡಿಗೆ ಮತ್ತೆ ಕಾವೇರಿ ನೀರು ಬಿಡುವ ಆದೇಶ ಹಿನ್ನೆಲೆಯಲ್ಲಿ ಸುಪ್ರೀಂಕೋರ್ಟ್ ಆದೇಶ ಪಾಲನೆ ಅನಿವಾರ್ಯ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಹೇಳಿದ್ದಾರೆ.
ಸುದ್ದಿಗಾರರ ಜೊತೆ ಮಾತನಾಡಿದ ಅವರು, ರಾಜ್ಯ ಸರ್ಕಾರ ನಿರ್ಧಾರ ಏನಿದೆ ಗೊತ್ತಿಲ್ಲ. ಆದರೆ ಕೇಂದ್ರ ಸರ್ಕಾರ ಸುಪ್ರೀಂಕೋರ್ಟ್ಗೆ ಮಂಡಳಿ ರಚನೆ ಸಾಧ್ಯವಿಲ್ಲ ಎಂದು ಅಫಿಡವಿಟ್ ಸಲ್ಲಿಸಿದೆ. ಹೀಗಾಗಿ ಕೇಂದ್ರ ಸರ್ಕಾರಕ್ಕೆ ಅಭಿನಂದನೆ ಸಲ್ಲಿಸುತ್ತೇನೆ ಎಂದು ಅವರು ಹೇಳಿದ್ದಾರೆ.
ಸುಪ್ರೀಂಕೋರ್ಟ್ಗೆ ನಾವು ಯಾವತ್ತು ಅಗೌರವ ತೋರಿಲ್ಲ. ಅವರ ಆದೇಶ ಪಾಲನೆ ಮಾಡುತ್ತಲೇ ಬಂದಿದ್ದೇವೆ. ತಜ್ಞರ ಸಮಿತಿ ಕಳುಹಿಸಲು ಸುಪ್ರೀಂಕೋರ್ಟ್ ಹೇಳಿದೆ. ಸಮಿತಿಯಲ್ಲಿ ನಾಲ್ಕು ರಾಜ್ಯಗಳ ಮುಖ್ಯ ಎಂಜಿನಿಯರ್ ಇರುತ್ತಾರೆ. ನಮಗೆ ಅನ್ಯಾಯವಾಗಲ್ಲ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.
ಈ ಸಂದರ್ಭದಲ್ಲಿ ಅಟಾರ್ನಿ ಜನರಲ್ ಮುಕುಲ್ ರೊಹ್ಟಾಗಿಯವರಿಗೂ ದೇವೇಗೌಡರು ಅಭಿನಂದನೆ ಸಲ್ಲಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.