
ನವದೆಹಲಿ (ಆ.01): ಎಲ್ಲಾ ವ್ಯವಹಾರಗಳಲ್ಲಿ ಆಧಾರ್ ಕಾರ್ಡನ್ನು ಕಡ್ಡಾಯಗೊಳಿಸಿರುವುದರಿಂದ ಖಾಸಗಿ ಮಾಹಿತಿ ಸೋರಿಕೆಯಾಗುತ್ತದೆ ಎನ್ನುವ ಪ್ರಶ್ನೆ ಸಾರ್ವಜನಿಕ ವಲಯದಲ್ಲಿ ಎದ್ದಿರುವ ಹಿನ್ನಲೆಯಲ್ಲಿ ನಾಗರೀಕರ ಮಾಹಿತಿಯನ್ನು ಟ್ರಾಕ್ ಮಾಡಲು ಸಾಧ್ಯವಿಲ್ಲ ಎಂದು ಸುಪ್ರೀಂಕೋರ್ಟ್ ಹೇಳಿದೆ.
ಆಧಾರ್ ಕಾರ್ಡ್’ನ ಮಾಹಿತಿ ಸೋರಿಕೆಯಾಗದಂತೆ ರಕ್ಷಣೆ ಮಾಡಲಾಗಿದೆ. ಒಂದು ವೇಳೇ ನ್ಯಾಯಾಲಯ ಅನುಮತಿ ನೀಡಿದರೂ ಕೂಡಾ ಸರ್ಕಾರ ನಾಗರೀಕರ ಮೇಲೆ ಕಣ್ಣಿಡಲು ಅವರ ಮಾಹಿತಿಯನ್ನು ಪಡೆಯಲು ಸಾಧ್ಯವಿಲ್ಲ ಎಂದು ಯುಐಡಿಎಐ ಹೇಳಿದೆ.
ಖಾಸಗಿ ಮಾಹಿತಿಯನ್ನು ಮೂಲಭೂತ ಹಕ್ಕು ಎಂದು ಪರಿಗಣಿಸುವುದಾದರೆ ಇಂದಿನ ಆನ್’ಲೈನ್ ಯುಗದಲ್ಲಿ ಯಾವುದೂ ಖಾಸಗಿಯಾಗಿ ಉಳಿದಿಲ್ಲ ಎಂದು ಯುಐಡಿಎಐ ಒಂಭತ್ತು ನ್ಯಾಯಾಧೀಶರನ್ನೊಳಗೊಂಡ ಪೀಠಕ್ಕೆ ಹೇಳಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.