ಪಿಒಕೆಯಲ್ಲಿ ಪ್ರಧಾನಿ ಇಮ್ರಾನ್‌ಗೆ 'ಗೋ ಬ್ಯಾಕ್' ಆಘಾತ!

Published : Sep 15, 2019, 07:58 AM ISTUpdated : Sep 15, 2019, 09:17 AM IST
ಪಿಒಕೆಯಲ್ಲಿ ಪ್ರಧಾನಿ ಇಮ್ರಾನ್‌ಗೆ 'ಗೋ ಬ್ಯಾಕ್' ಆಘಾತ!

ಸಾರಾಂಶ

ಪಿಒಕೆಯಲ್ಲೇ ಗೋ ಬ್ಯಾಕ್‌ ಇಮ್ರಾನ್‌ ಘೋಷಣೆ| ಪಿಒಕೆಯ ಮುಜಾಫ್ಫರಬಾದ್‌ನಲ್ಲಿ ಖಾನ್‌ರ ಸುಳ್ಳಿನ ಭಾಷಣ| ಇದರಿಂದ ಕ್ರೋಧಗೊಂಡ ಜನರಿಂದ ಇಮ್ರಾನ್‌ಗೆ ಘೇರಾವ್‌| ಗೋ ಬ್ಯಾಕ್‌ ಇಮ್ರಾನ್‌, ನಿಯಾಜಿ ಎಂಬ ಘೋಷಣೆಗಳ ಮೊರೆತ| ಪಿಒಕೆ ಮೇಲೆ ಪಾಕಿಸ್ತಾನದ ಸೇನೆ, ಸರ್ಕಾರದಿಂದಲೇ ದೌರ್ಜನ್ಯ| ಪಿಒಕೆಗೆ ಹರಿಯಬೇಕಿದ್ದ ನೀರು ಪಾಕ್‌ನ ಇತರ ಭಾಗಗಳ ಪಾಲು

ನವದೆಹಲಿ[ಸೆ.15]: ಜಮ್ಮು-ಕಾಶ್ಮೀರದಲ್ಲಿದ್ದ ವಿಶೇಷಾಧಿಕಾರ ರದ್ದುಗೊಳಿಸಿದ ಭಾರತದ ವಿರುದ್ಧ ಇಲ್ಲ ಸಲ್ಲದ ಆರೋಪಗಳನ್ನು ಹೊರಿಸುವ ಮೂಲಕ ಅಂತಾರಾಷ್ಟ್ರೀಯ ಮಟ್ಟದಲ್ಲಿ ತಾನೇ ಬೆತ್ತಲಾಗುತ್ತಿರುವ ಹೊರತಾಗಿಯೂ, ಪಾಕಿಸ್ತಾನ ಮಾತ್ರ ಇನ್ನೂ ಬುದ್ಧಿ ಕಲಿತಂತೆ ಕಾಣುತ್ತಿಲ್ಲ.

ಇತ್ತೀಚೆಗಷ್ಟೇ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಕಾಶ್ಮೀರ ವಿಚಾರಕ್ಕೆ ಸಂಬಂಧಿಸಿ ಭಾರತದ ವಿರುದ್ಧ ಸುಳ್ಳು ಆರೋಪಿಸಿದ್ದ ಪಾಕಿಸ್ತಾನದ ಕಪಟತನದ ಮುಖವಾಡವನ್ನು ಭಾರತ ಬಯಲು ಮಾಡಿತ್ತು. ಇದರ ಬೆನ್ನಲ್ಲೇ, ಪಾಕ್‌ ಆಕ್ರಮಿತ ಕಾಶ್ಮೀರವನ್ನು ಎತ್ತಿಕಟ್ಟಬೇಕೆಂಬ ಹುಮ್ಮಸ್ಸಿನಲ್ಲಿದ್ದ ಪಾಕಿಸ್ತಾನ ಪ್ರಧಾನಿ ಇಮ್ರಾನ್‌ ಖಾನ್‌ ಅಲ್ಲಿನ ಜನರಿಂದಲೇ ಮುಖಭಂಗ ಅನುಭವಿಸಿದ ಘಟನೆ ನಡೆದಿದೆ.

ಪಿಒಕೆಯಲ್ಲಿನ ಮುಜಾಫ್ಫರಬಾದ್‌ಗೆ ಭೇಟಿ ನೀಡಿದ ಪ್ರಧಾನಿ ಇಮ್ರಾನ್‌ ಖಾನ್‌ ಅವರನ್ನುದ್ದೇಶಿಸಿ ಸ್ಥಳೀಯರು ‘ಗೋ ನಿಯಾಜಿ ಗೋ ಬ್ಯಾಕ್‌’(ಪಾಕ್‌ ಪ್ರಧಾನಿ ಹಿಂದಕ್ಕೆ ಹೋಗಿ) ಎಂಬ ಘೋಷಣೆಗಳನ್ನು ಕೂಗಿದರು. ಇದರಿಂದಾಗಿ ಜಮ್ಮು-ಕಾಶ್ಮೀರಕ್ಕಿದ್ದ ವಿಶೇಷಾಧಿಕಾರ ರದ್ದುಗೊಳಿಸಿದ ಬಳಿಕ ಭಾರತ ಸರ್ಕಾರ ನಿಷೇಧಾಜ್ಞೆ ಹೇರುವ ಮೂಲಕ ಜನರ ಬದುಕನ್ನು ತೊಂದರೆಗೆ ಸಿಲುಕಿಸಿದೆ ಎಂದು ದೂರಲು ಮುಂದಾಗಿದ್ದ ಪಾಕ್‌ಗೆ ಭಾರೀ ಅವಮಾನವಾದಂತಾಗಿದೆ.

ಶುಕ್ರವಾರ ಮುಜಾಫ್ಫರಬಾದ್‌ಗೆ ಭೇಟಿ ನೀಡಿದ ಪಾಕ್‌ ಪ್ರಧಾನಿ ಇಮ್ರಾನ್‌, ಅಲ್ಲಿನ ಜನರನ್ನುದ್ದೇಶಿಸಿ ಜಮ್ಮು-ಕಾಶ್ಮೀರ ಜನತೆಯ ಹಕ್ಕುಗಳಿಗಾಗಿ ಹೋರಾಡುವಂತೆ ಕರೆ ನೀಡಿದರು. ಮುಂದುವರಿದ ಅವರು, ಜಮ್ಮು-ಕಾಶ್ಮೀರ ಜನತೆಯ ಹಕ್ಕುಗಳನ್ನು ಭಾರತ ಸರ್ಕಾರ ಕಸಿದುಕೊಂಡಿದೆ. ಈ ಬಗ್ಗೆ ಅಂತಾರಾಷ್ಟ್ರೀಯ ಮಟ್ಟದ ಪ್ರತಿಯೊಂದು ವೇದಿಕೆಗಳಲ್ಲೂ ಪಾಕಿಸ್ತಾನ ಮಾತ್ರವೇ ಏಕಾಂಗಿಯಾಗಿ ಹೋರಾಟ ಮಾಡುತ್ತಿದೆ ಎಂಬುದಾಗಿ ಸುಳ್ಳು ಭಾಷಣ ಶುರುವಿಟ್ಟುಕೊಂಡರು. ಈ ವೇಳೆ ಪಿಒಕೆ ಜನತೆ, ಇಮ್ರಾನ್‌ ಅವರು ತಮ್ಮ ಸುಳ್ಳಿನ ಕಂತೆಯ ಭಾಷಣಕ್ಕೆ ತಲೆದೂಗುತ್ತಾರೆ ಎಂಬ ಆಶಾವಾದದಲ್ಲಿದ್ದರು.

ಆದರೆ, ಅಲ್ಲಿ ನೆರೆದಿದ್ದ ನೂರಾರು ಜನ ‘ಇಮ್ರಾನ್‌ ಗೋ ಬ್ಯಾಕ್‌’ ಎಂಬಂಥ ಘೋಷಣೆಗಳನ್ನು ಕೂಗಿದರು. ಅಲ್ಲದೆ, ಕಾಶ್ಮೀರಕ್ಕೆ ಸಂಬಂಧಿಸಿದಂತೆ ಪಾಕಿಸ್ತಾನ ನಡೆದುಕೊಂಡ ರೀತಿಯ ವಿರುದ್ಧವೂ ಪ್ರತಿಭಟನೆ ಕೈಗೊಂಡರು. ಜೊತೆಗೆ, ತಮ್ಮ ಮೇಲೆ ಪಾಕಿಸ್ತಾನ ಸೇನೆ ಹಲವು ದೌರ್ಜನ್ಯಗಳನ್ನು ಎಸಗಿದೆ ಎಂದು ಬಹಿರಂಗವಾಗಿಯೇ ದೂರಿದರು. ತಮ್ಮ ಭಾಗಕ್ಕೆ ಬರಬೇಕಿದ್ದ ನದಿ ನೀರನ್ನು ಪಾಕಿಸ್ತಾನದ ಇತರ ಭಾಗಗಳಿಗೆ ಹರಿಸಿಕೊಳ್ಳುವ ಮೂಲಕ ಪಾಕಿಸ್ತಾನ ತಮ್ಮ ಮೇಲೆ ನೀರಿನ ಯುದ್ಧ ಸಾರಿದೆ. ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿ ಪಾಕಿಸ್ತಾನ ಬಹಿರಂಗವಾಗಿಯೇ ಹಲವು ಭಯೋತ್ಪಾದಕ ಕೇಂದ್ರಗಳನ್ನು ಪುನಃ ಆರಂಭಿಸಿದೆ ಎಂಬ ಗಂಭೀರ ಆರೋಪಗಳು ಕೇಳಿಬಂದವು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ನಮ್ಮನ್ನು ಗುಲಾಮರನ್ನಾಗಿಸಿ ಹಿಂದೂ ಧರ್ಮ ಸೃಷ್ಟಿಸಿದ್ದು ಬ್ರಾಹ್ಮಣರು: ನಿವೃತ್ತ ಹೈಕೋರ್ಟ್ ನ್ಯಾಯಮೂರ್ತಿ
ಇಂಡಿಗೋದ ಭಾರೀ ಕುಸಿತ: ಒಂದೇ ವಿಮಾನಯಾನ ಸಂಸ್ಥೆಯ ಏಕಸ್ವಾಮ್ಯವಾದಾಗ