ಎಲ್ಲಾ ವಿವಾದಗಳ ಬಗ್ಗೆ ಮಾತುಕತೆಗೆ ಸಿದ್ಧ: ಮೋದಿಗೆ ಇಮ್ರಾನ್ ಪತ್ರ!

Published : Jun 08, 2019, 09:19 AM IST
ಎಲ್ಲಾ ವಿವಾದಗಳ ಬಗ್ಗೆ ಮಾತುಕತೆಗೆ ಸಿದ್ಧ: ಮೋದಿಗೆ ಇಮ್ರಾನ್ ಪತ್ರ!

ಸಾರಾಂಶ

ಮಹತ್ವದ ವಿಷಯ ಕುರಿತ ಮಾತುಕತೆಗೆ ಪಾಕ್‌ ಸಿದ್ಧ| ಜೈಶಂಕರ್‌ಗೆ ಖುರೇಶಿ ಪತ್ರ

ಇಸ್ಲಾಮಾಬಾದ್‌[ಮೇ.08]: ಭಾರತದ ನೂತನ ವಿದೇಶಾಂಗ ಸಚಿವ ಎಸ್‌.ಜೈಶಂಕರ್‌ ಅವರಿಗೆ ಪಾಕಿಸ್ತಾನದ ವಿದೇಶಾಂಗ ಸಚಿವ ಶಾ ಮೆಹಮೂದ್‌ ಖುರೇಶಿ ಶುಕ್ರವಾರ ಪತ್ರ ಬರೆದಿದ್ದು, ಎಲ್ಲಾ ಪ್ರಮುಖ ವಿಷಯಗಳ ಕುರಿತು ಭಾರತದೊಂದಿಗೆ ಚರ್ಚೆಗೆ ಪಾಕಿಸ್ತಾನ ಸಿದ್ಧ ಎಂದಿದ್ದಾರೆ.

ಪ್ರಾದೇಶಿಕ ಶಾಂತಿ ಕಾಯ್ದುಕೊಳ್ಳಲು ಬದ್ಧತೆಯೊಂದಿಗೆ, ಇಸ್ಲಾಮಾಬಾದ್‌ ಮತ್ತು ದೆಹಲಿ ನಡುವಿನ ಎಲ್ಲ ಮಹತ್ವದ ವಿಷಯಗಳ ಕುರಿತು ಮಾತುಕತೆಗೆ ಮುಂದಾಗೋಣ ಎಂದು ಪತ್ರದಲ್ಲಿ ಕೋರಿದ್ದಾರೆ.

ಪಾಕಿಸ್ತಾನ ಪ್ರಧಾನಿ ಇಮ್ರಾನ್‌ಖಾನ್‌ ಕೂಡ ಮೇ 26ರಂದು ಪ್ರಧಾನಿ ನರೇಂದ್ರ ಮೋದಿ ಜತೆ ಮಾತುಕತೆ ನಡೆಸಿ ಪ್ರಾದೇಶಿಕ ಶಾಂತಿ ಮತ್ತು ಸಮೃದ್ಧಿಗೆ ಜತೆಯಾಗಿ ಹೋಗೋಣ ಎಂದಿದ್ದರು. ಇದಕ್ಕೆ ಪ್ರತಿಕ್ರಿಯಿಸಿದ್ದ ಮೋದಿ, ಹಿಂಸೆ ರಹಿತ ವಾತಾವರಣ ಸೃಷ್ಟಿ, ಪರಸ್ಪರ ವಿಶ್ವಾಸ ಹಾಗೂ ಭಯೋತ್ಪಾದನೆ ನಿರ್ಮೂಲನೆಯಿಂದ ಮಾತ್ರ ಪ್ರಾದೇಶಿಕ ಶಾಂತಿ ಸಾಧ್ಯ ಎಂದು ಸ್ಪಷ್ಟಪಡಿಸಿದ್ದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಮಣ್ಣಲ್ಲಿ ಮರೆಯಾಗಿದ್ದ ಜೈನರ ಕಾಲದ ಕಲ್ಯಾಣಿಗೆ ಮರುಜೀವ ನೀಡಿದ ಉದ್ಯೋಗ ಖಾತ್ರಿ ಯೋಜನೆ
ನಟಿ ಶಿಲ್ಪಾ ಶೆಟ್ಟಿ ಒಡೆತನದ ಪಬ್‌ನಲ್ಲಿ ಉದ್ಯಮಿಯಿಂದ ಗಲಾಟೆ; ಸಿಬ್ಬಂದಿ ಮೇಲೆ ಹಲ್ಲೆಗೆ ಯತ್ನ!