
ನವದೆಹಲಿ(ಸೆ.20): ಪಾಕಿಸ್ತಾನದ ನೂತನ ಪ್ರಧಾನಿ ಇಮ್ರಾನ್ ಖಾನ್ ಭಾರತದ ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದಿದ್ದು, ಉಭಯ ರಾಷ್ಟ್ರಗಳ ನಡುವಿನ ದ್ವಿಪಕ್ಷೀಯ ಮಾತುಕತೆ ಪುನಾರಂಭಿಸುವ ಪ್ರಸ್ತಾವನೆ ಇಟ್ಟಿದ್ದಾರೆ.
ಅಮೆರಿಕದ ನ್ಯೂಯಾರ್ಕ್ ನಲ್ಲಿ ಈ ತಿಂಗಳ ಕೊನೆಯಲ್ಲಿ ನಡೆಯಲಿರುವ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಭಾರತದ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್, ಪಾಕಿಸ್ತಾನದ ವಿದೇಶಾಂಗ ಸಚಿವ ಷಾ ಮೆಹ್ಮೂದ್ ಖುರೇಶಿ ನಡುವೆ ಸಭೆ ನಡೆಸುವ ಬಗ್ಗೆ ಪರಿಶೀಲಿಸುವಂತೆ ಪತ್ರದಲ್ಲಿ ಇಮ್ರಾನ್ ಖಾನ್ ಮನವಿ ಮಾಡಿದ್ದಾರೆ.
ಎರಡು ದೇಶಗಳ ನಡುವೆ ಅರ್ಥಪೂರ್ಣ ಹಾಗೂ ರಚನಾತ್ಮಕ ಮೈತ್ರಿಯಾಗುವುದನ್ನು ಬಯಸುತ್ತೇನೆ ಎಂಬ ಮೋದಿಯವರ ಮಾತಿಗೆ ಪ್ರತಿಕ್ರಿಯೆಯಾಗಿ ಇಮ್ರಾನ್ ಖಾನ್ ಈ ಪತ್ರ ಬರೆದಿದ್ದಾರೆ ಎನ್ನಲಾಗಿದೆ.
ಇನ್ನು ಈ ಹಿಂದೆ ತಾವು ಪಾಕ್ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಿದ ಬಳಿಕ ಮಾತನಾಡಿದ್ದ ಇಮ್ರಾನ್ ಖಾನ್ ವಿವಾದಗಳನ್ನು ಬಗೆಹರಿಸಲು ಭಾರತ ಒಂದು ಹೆಜ್ಜೆ ಮುಂದಿಟ್ಟರೆ ಪಾಕಿಸ್ತಾನ ಎರಡು ಹೆಜ್ಜೆ ಮುಂದಿಡುವುದಾಗಿ ತಿಳಿಸಿದ್ದರು.
ಉಭಯ ದೇಶಗಳ ನಡುವೆ ದ್ವಿಪಕ್ಷೀಯ ಸಮಗ್ರ ಮಾತುಕತೆ ನಡೆಸಲು 2015ರಲ್ಲಿ ಪ್ರಯತ್ನಿಸಲಾಗಿತ್ತು. ಆದರೆ ಪಠಾಣ್ ಕೋಟ್ ದಾಳಿ ಹಿನ್ನೆಲೆಯಲ್ಲಿ ಮಾತುಕತೆ ಸ್ಥಗಿತಗೊಂಡಿತ್ತು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.