
ನವದೆಹಲಿ[ಮೇ.17]: ಜಗತ್ತಿನ ಏಳು ಅದ್ಭುತಗಳಲ್ಲಿ ಒಂದಾದ ತಾಜ್ ಮಹಲ್ ಅನ್ನು ವೀಕ್ಷಿಸಲು ತೆರಳಬೇಕಾದರೆ ಇನ್ನು ಮುಂದೆ ಪ್ರವಾಸಿಗರು ಶೂ ಕವರ್ ಹಾಕಿಕೊಳ್ಳುವುದು ಕಡ್ಡಾಯ ಎಂಬ ನಿಯಮ ಜಾರಿಗೆ ಬರಲಿದೆ.
ಮಾಲಿನ್ಯದಿಂದಾಗಿ ಕಳೆಗುಂದುತ್ತಿರುವ ತಾಜ್ ಮಹಲ್ ರಕ್ಷಣೆಗೆ ಕ್ಷೇತ್ರ ನಿರ್ವಹಣೆ ಯೋಜನೆ ಸಿದ್ಧಪಡಿಸಿ ಎಂದು ಸುಪ್ರೀಂಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ಮಾಲಿನ್ಯದಿಂದ ರಕ್ಷಣೆಗೆ ಕೈಗೊಳ್ಳಬಹುದಾದ ಹಲವಾರು ಕ್ರಮಗಳನ್ನು ಭಾರತೀಯ ಪುರಾತತ್ವ ಸರ್ವೇಕ್ಷಣಾ ಸಂಸ್ಥೆ ಶಿಫಾರಸು ಮಾಡಿದೆ.
ಆಗ್ರಾದಲ್ಲಿ ವಾಹನಗಳಿಗೆ ಕಡ್ಡಾಯವಾಗಿ ಸಿಎನ್ಜಿ ಇಂಧನವನ್ನೇ ಬಳಸಬೇಕು. ಮೆಟ್ರೋ ಮತ್ತು ಇತರ ಮೂಲ ಸೌಕರ್ಯಗಳ ನಿರ್ಮಾಣದಿಂದ ಉಂಟಾಗುವ ಧೂಳಿನ ಕಣಗಳಿಂದ ತಾಜ್ ಮಹಲ್ ರಕ್ಷಿಸಲು ಕ್ರಮಗಳನ್ನು ಕೈಗೊಳ್ಳಬೇಕು. ತ್ಯಾಜ್ಯ ಸುಡುವುದನ್ನು ಸಂಪೂರ್ಣವಾಗಿ ನಿಷೇಧಿಸಬೇಕು. ಸಾರ್ವಜನಿಕ ಸಾರಿಗೆಗೂ ಸಿಎನ್ಜಿ ವಾಹವವನ್ನೇ ಬಳಸಬೇಕು. ವಿದ್ಯುತ್ ಚಾಲಿತ ವಾಹನಗಳನ್ನು ಉತ್ತೇಜಿಸಬೇಕು ಎಂದು ಭಾರತೀಯ ಪುರಾತತ್ವ ಇಲಾಖೆ ಶಿಫಾರಸು ಮಾಡಿದೆ.
ಗೆದ್ದವರಾರು? ಬಿದ್ದವರಾರು ? ಮಹಾಸಂಗ್ರಾಮದ ಮಹಾಫಲಿತಾಂಶ. ಗುರುವಾರ 23 ಮೇ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.