
ನವದೆಹಲಿ(ಫೆ.14): ಎರಡು ತಿಂಗಳ ಹಿಂದೆ ನಿಧನ ಹೊಂದಿದ ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಜೆ. ಜಯಲಲಿತಾ ಈಗ ಏನಾದರೂ ಬದುಕಿದ್ದರೆ ಅವರಿಗೂ 4 ವರ್ಷ ಜೈಲು ಶಿಕ್ಷೆಯಾಗುತ್ತಿತ್ತು!
ಹೌದು. ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ವಿ.ಕೆ. ಶಶಿಕಲಾ, ಅವರ ಬಂಧುಗಳಾದ ಇಳವರಸಿ ಹಾಗೂ ಸುಧಾಕರನ್ಗೆ ಸುಪ್ರೀಂಕೋರ್ಟ್ 4 ವರ್ಷ ಜೈಲು ಶಿಕ್ಷೆ ವಿಸಿ ಮಂಗಳವಾರ ತೀರ್ಪು ನೀಡಿದೆ. ತಕ್ಷಣವೇ ಜೈಲಿಗೆ ಹೋಗುವಂತೆ ಸೂಚಿಸಿದೆ. ಒಂದು ವೇಳೆ ಜಯಲಲಿತಾ ಜೀವಂತವಾಗಿದ್ದರೆ, ಅವರಿಗೂ ಇದೇ ರೀತಿ ಶಿಕ್ಷೆಯಾಗುತ್ತಿತ್ತು ಎಂದು ಕಾನೂನು ತಜ್ಞರು ಅಭಿಪ್ರಾಯಪಡುತ್ತಾರೆ.
ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಜಯಲಲಿತಾ ಅವರೇ ಆರೋಪಿ ನಂ.1 ಆಗಿದ್ದರು. ಅವರು ದೋಷಿಯಾಗದೇ, ಉಳಿದವರನ್ನು ದೋಷಿ ಎಂದು ಹೇಳಲು ಬರುವುದಿಲ್ಲ ಎಂದು ತಜ್ಞರು ಹೇಳಿದ್ದಾರೆ. ಜಯಾ ನಿಧನ ಹೊಂದಿರುವ ಹಿನ್ನೆಲೆಯಲ್ಲಿ ಅವರ ವಿರುದ್ಧದ ಪ್ರಕರಣವನ್ನು ಸುಪ್ರೀಂಕೋರ್ಟ್ ಕೈಬಿಟ್ಟಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.