
ರಾಂಚಿ(ಅ.17): ಜಾರ್ಖಂಡ್'ನ ಸಿಮ್'ಡೆಗಾ ಜಿಲ್ಲೆಯಲ್ಲಿ ನಾಲ್ಕು ದಿನಗಳ ನಿರಂತರ ಹಸಿವಿನ ಬಾಧೆ ತಾಳಲಾರದೆ 11 ವರ್ಷದ ಬಾಲಕಿ ಸಾವಿಗೀಡಾಗಿರುವ ದಾರುಣ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ರೇಷನ್ ಕಾರ್ಡ್ಗೆ ಆಧಾರ್ ಜೋಡಣೆ ಮಾಡದ ಕಾರಣಕ್ಕಾಗಿ ರೇಷನ್ ನೀಡಿರಲಿಲ್ಲ. ಈ ಹಿನ್ನೆಲೆಯಲ್ಲಿ ನಾವಿಂದು ಪುತ್ರಿಯನ್ನು ಕಳೆದುಕೊಂಡಿದ್ದೇವೆ ಎಂದು ಬಾಲಕಿಯ ತಾಯಿ ಕೋಯಿಲಿ ದೇವಿ ಆರೋಪಿಸಿದ್ದಾರೆ.
ಜಿಲ್ಲೆಯ ಕರಿಮಟಿ ಗ್ರಾಮದಲ್ಲಿ ವಾಸವಾಗಿರುವ ಕುಟುಂಬ ಸದಸ್ಯರ ಬಳಿ ಆಧಾರ್ ಕಾರ್ಡ್ಗಳಿವೆ. ಆದರೆ, ತಾಂತ್ರಿಕ ಕಾರಣದಿಂದಾಗಿ ರೇಷನ್ ಕಾರ್ಡ್ನೊಂದಿಗೆ ಆಧಾರ್ ಜೋಡಣೆ ಸಾಧ್ಯವಾಗಿರಲಿಲ್ಲ. ಆ ಕಾರಣ ರೇಷನ್ ಸಿಗದೇ ಬಾಲಕಿಯಾದ ಸಂತೋಷಿ ಕುಮಾರಿ(11) ಹಸಿವಿನಿಂದ ಮೃತ ಪಟ್ಟಿದ್ದಾಳೆ ಎಂದು ದೂರಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.