ರಾಜಸ್ಥಾನದಲ್ಲಿ ನದಿಗೆ ಉರುಳಿದ ಬಸ್ : 32 ಮಂದಿ ದುರ್ಮರಣ

Published : Dec 23, 2017, 12:33 PM ISTUpdated : Apr 11, 2018, 01:01 PM IST
ರಾಜಸ್ಥಾನದಲ್ಲಿ ನದಿಗೆ ಉರುಳಿದ ಬಸ್ : 32 ಮಂದಿ ದುರ್ಮರಣ

ಸಾರಾಂಶ

ರಾಜಸ್ಥಾನದ ಜೈಪುರದಲ್ಲಿ  ಬಸ್ ನದಿಗೆ ಉರುಳಿ ಬಿದ್ದು  32 ಜನರು ಸಾವನ್ನಪ್ಪಿರುವ ದಾರುಣ ಘಟನೆ ಶನಿವಾರ ಸಂಭವಿಸಿದೆ.

ಜೈಪುರ (ಡಿ.23): ರಾಜಸ್ಥಾನದ ಜೈಪುರದಲ್ಲಿ  ಬಸ್ ನದಿಗೆ ಉರುಳಿ ಬಿದ್ದು  32 ಜನರು ಸಾವನ್ನಪ್ಪಿರುವ ದಾರುಣ ಘಟನೆ ಶನಿವಾರ ಸಂಭವಿಸಿದೆ.

ಇಲ್ಲಿನ ಮದೋಪುರ್ ಜಿಲ್ಲೆಯ ದುಬಿ ಪ್ರದೇಶದಲ್ಲಿ ಬನಾಸ್ ನದಿಗೆ ನಿರ್ಮಿಸಲಾಗಿರುವ ಸೇತುವೆಯ ಮೇಲಿನಿಂದ ಬಸ್ ನದಿಗೆ ಉರುಳಿ ಬಿದ್ದಿದೆ.

ಈಗಾಗಲೇ  26 ಮೃತದೇಹಗಳನ್ನು ನದಿಯಿಂದ ಹೊರಕ್ಕೆ ತೆಗೆಯಲಾಗಿದ್ದು, ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ ನಡೆಸಲಾಗುತ್ತಿದೆ ಎಂದು ಸರ್ಕಲ್ ಇನ್ಸ್'ಪೆಕ್ಟರ್  ತಿಳಿಸಿದ್ದಾರೆ.

ಖಾಸಗಿ ಬಸ್ ತನ್ನ ನಿಯಂತ್ರಣ ಕಳೆದುಕೊಂಡು ಸೇತುವೆಯ  ಕಂಬಿಗಳಿಗೆ ಗುದ್ದಿದ್ದು, ಬಳಿಕ ಕೆಳಕ್ಕೆ ಉರುಳಿ ಬಿದ್ದಿದೆ.  ಸ್ಥಳಕ್ಕೆ ತಕ್ಷಣವೇ ಪೊಲೀಸರು ಆಗಮಿಸಿ ರಕ್ಷಣಾ ಕಾರ್ಯಾಚರಣೆ ಆರಂಭಿಸಿದ್ದರು. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗಳಿಗೆ ದಾಖಲು ಮಾಡಲಾಗಿದೆ.

ಬಸ್'ನಲ್ಲಿದ್ದ ಹೆಚ್ಚಿನ ಪ್ರಯಾಣಿಕರೆಲ್ಲರೂ ಕೂಡ ಉತ್ತರ ಪ್ರದೇಶ ಮೂಲದವರು ಎನ್ನಲಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಪ್ರಥಮ ಪಿಯುಸಿ ವಾರ್ಷಿಕ ಪರೀಕ್ಷೆ 2025-26 ವೇಳಾಪಟ್ಟಿ, ಸುತ್ತೋಲೆ ಹೊರಡಿಸಿದ ಶಿಕ್ಷಣ ಇಲಾಖೆ
ಬೈಕ್ ರೈಡಿಂಗ್‌ನಲ್ಲಿರುವ ಗಂಡನ ಮೇಲೆ ಆಕ್ರೋಶ ತೀರಿಸಿಕೊಂಡ ಹೆಂಡತಿ, ವಿಡಿಯೋ ವೈರಲ್