ಬಿಗ್ ಶಾಕ್ : 11 ಮುಖಂಡರು ಬಿಜೆಪಿಯಿಂದ ಔಟ್

Published : Nov 23, 2018, 11:05 AM ISTUpdated : Nov 23, 2018, 03:11 PM IST
ಬಿಗ್ ಶಾಕ್ :  11 ಮುಖಂಡರು  ಬಿಜೆಪಿಯಿಂದ ಔಟ್

ಸಾರಾಂಶ

ಬಿಜೆಪಿಯಲ್ಲೀಗ ಮಹತ್ವದ ಬದಲಾವಣೆಯೊಂದು ನಡೆದಿದೆ. 11 ಮುಖಂಡರು ಪಕ್ಷದಿಂದ ಔಟ್ ಆಗಿದ್ದಾರೆ. ಚುನಾವಣೆ ಹೊಸ್ತಿಲಲ್ಲೇ  ಇದೊಂದು ಶಾಕ್ ಆಗಿದೆ. 

ಜೈಪುರ :  ದೇಶದ ಪಂಚ ರಾಜ್ಯಗಳಲ್ಲಿ ಚುನಾವಣೆ ನಡೆಯುತ್ತಿದ್ದು, ವಿವಿಧ ಪಕ್ಷಗಳು ಸೂಕ್ತ ತಯಾರಿಯಲ್ಲಿ ತೊಡಗಿಕೊಂಡಿವೆ. ರಾಜಸ್ಥಾನದಲ್ಲಿಯೂ ಕೂಡ ವಿಧಾನಸಭಾ ಚುನಾವಣೆ ನಡೆಯುತ್ತಿದ್ದು, ಟಿಕೆಟ್ ಗಾಗಿ ಪಕ್ಷದಲ್ಲಿ ನಾಯಕರ ನಡುವಿನ ಮುನಿಸು ಇದೀಗ ಬಹಿರಂಗವಾಗುತ್ತಿದೆ. 

ಇದೀಗ ರಾಜಸ್ಥಾನದಲ್ಲಿ ಬಿಜೆಪಿಗೆ ಸಡ್ಡುಹೊಡೆದು  ಚುನಾವಣೆಯಲ್ಲಿ  ಬಂಡಾಯವಾಗಿ ಸ್ಪರ್ಧಿಸಿದ್ದ 11 ಮುಖಂಡರನ್ನು ಪಕ್ಷದಿಂದ ಉಚ್ಛಾಟನೆ ಮಾಡಿದೆ. 

ವಸುಂಧರಾ ರಾಜೆ ಸಂಪುಟದ ನಾಲ್ವರು ಸಚಿವರು ಸೇರಿದಂತೆ ಒಟ್ಟು 11 ಮುಖಂಡರಿಗೆ ಪಕ್ಷದಿಂದ ಗೇಟ್ ಪಾಸ್ ನೀಡಲಾಗಿದೆ. 

ಪ್ರಮುಖ ಬಿಜೆಪಿ ಮುಖಂಡರಾದ ಸುರೇಂದ್ರ ಗೋಯಲ್, ಲಕ್ಷ್ಮೀನಾರಾಯಣ್ ದುಬೆ, ರಾಧೆಶ್ಯಾಮ್  ಗಂಗಾನಗರ್ ಸೇರಿದಂತೆ ಒಟ್ಟು 11 ಮುಖಂಡರನ್ನು ಪಕ್ಷ ಉಚ್ಛಾಟಿಸಿ ನಿರ್ಧಾರ ಕೈಗೊಂಡಿದೆ. 

ಇನ್ನು ಚುನಾವಣೆಯಲ್ಲಿ ಸ್ಪರ್ಧಿಸಲು ಟಿಕೆಟ್ ಲಭ್ಯವಾಗದೇ  ಬಂಡಾಯವಾಗಿ ನಾಮಪತ್ರ ಸಲ್ಲಿಕೆ ಮಾಡಿ, ಪಕ್ಷದ ಉಪಾಧ್ಯಕ್ಷ ಸ್ಥಾನದಿಂದ ಕೆಳಕ್ಕೆ ಇಳಿದಿದ್ದ ಶಾಸಕ ಗ್ಯಾನ್ ದೇವ್ ಅಹುಜಾ ಇದೀಗ ಮತ್ತೆ ಉಪಾಧ್ಯಕ್ಷ ಸ್ಥಾನವನ್ನು ಅಲಂಕರಿಸಿದ್ದಾರೆ.  

ರಾಜಸ್ಥಾನದಲ್ಲಿ ಇದೇ ಡಿಸೆಂಬರ್ 7 ರಂದು ಚುನಾವಣೆ ನಡೆಯಲಿದ್ದು, 11ರಂದು ಫಲಿತಾಂಶ ಪ್ರಕಟವಾಗುತ್ತಿದೆ.  

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಅಯೋಧ್ಯೆಯ ರಾಮಲಲ್ಲಾ ಪ್ರತ್ಯಕ್ಷನಾಗಿ ಆಶೀರ್ವದಿಸಿದರೆ ಹೇಗಿರತ್ತೆ? ರೋಮಾಂಚಕಾರಿ ವಿಡಿಯೋ ವೈರಲ್​
ಮೆಹೆಂದಿಯಾಗಿತ್ತು, ಆದರೆ ಮದುವೆಯಾಗಲ್ಲ: ಕೊನೆಗೂ Palash Muchhal ಜೊತೆಗಿನ ಸಂಬಂಧಕ್ಕೆ ತೆರೆ ಎಳೆದ Smriti Mandhana