ಇಂಡಸ್ ಜಲ ಒಪ್ಪಂದ: ಸಂಸತ್ ನಲ್ಲಿ ಚರ್ಚಿಸಿದ ಬಳಿಕ ಮೋದಿ ನಿರ್ಧಾರ

Published : Sep 26, 2016, 11:44 AM ISTUpdated : Apr 11, 2018, 12:56 PM IST
ಇಂಡಸ್ ಜಲ ಒಪ್ಪಂದ: ಸಂಸತ್ ನಲ್ಲಿ ಚರ್ಚಿಸಿದ ಬಳಿಕ ಮೋದಿ ನಿರ್ಧಾರ

ಸಾರಾಂಶ

ನವದೆಹಲಿ (ಸೆ.26): ಉರಿ ಭಯೋತ್ಪಾದಕ ದಾಳಿ ಹಿನ್ನೆಲೆಯಲ್ಲಿ 1960 ರಲ್ಲಿ ಪಾಕ್ ಜೊತೆ ಮಾಡಿಕೊಂಡ 'ಇಂಡಸ್ ಜಲ ಒಪ್ಪಂದ'ವನ್ನು ಮುಂದುವರೆಸಬೇಕೆ ಬೇಡವೇ ಕುರಿತಂತೆ ವಿವಾದ ನಡೆಯುತ್ತಿದೆ. ಈ ಸಂಬಂಧ ಪ್ರಧಾನಿ ಮೋದಿ ಉನ್ನತ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಿದರು.

ಕಾಶ್ಮೀರದ ಉರಿ ಪ್ರದೇಶದ ಮೇಲೆ ಸೆ.18 ರಂದು ಪಾಕ್ ಭಯೋತ್ಪಾದಕ ದಾಳಿ ಮಾಡಿದ್ದು 18 ಮಂದಿ ಸೈನಿಕರು ಮೃತಪಟ್ಟಿದ್ದರು. ಈ ಹಿನ್ನೆಲೆಯಲ್ಲಿ 1960 ರಲ್ಲಿ ಮಾಡಿಕೊಂಡ ಇಂಡಸ್ ಜಲ ಒಪ್ಪಂದವನ್ನು ಮುಂದುವರೆಸಬೇಕೇ, ಅದರ ಸಾಧಕ-ಬಾಧಕಗಳ ಬಗ್ಗೆ ಕೇಂದ್ರ ಸರ್ಕಾರ ಚಿಂತನೆ ನಡೆಸುತ್ತಿದೆ.

ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್, ವಿದೇಶಾಂಗ ಕಾರ್ಯದರ್ಶಿ ಎಸ್.ಜೈಶಂಕರ್, ಜಲ ಸಂಪನ್ಮೂಲ ಕಾರ್ಯದರ್ಶಿ ಶಶಿ ಶೇಖರ್ ಸೇರಿದಂತೆ ಹಿರಿಯ ಅಧಿಕಾರಿಗಳ ಜೊತೆ ಮೋದಿ ಸಮಾಲೋಚನೆ ನಡೆಸಿದರು. ಸಂಸತ್ ನಲ್ಲಿ ಚರ್ಚಿಸಿದ ಬಳಿಕ ಕೇಂದ್ರ ನಿರ್ಧಾರ ತೆಗೆದುಕೊಳ್ಳಲಿದೆ ಎಂದು ತಿಳಿದು ಬಂದಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಕೇರಳ ವರ್ಸಸ್‌ ಕರ್ನಾಟಕ : ಬುಲ್ಡೋಜರ್‌ ನ್ಯಾಯ ಎಂದ ಪಿಣರಾಯಿಗೆ ತರಾಟೆ
ಚೀನಾದಲ್ಲಿ 700 ಕಿ.ಮೀ ವೇಗದ ರೈಲಿನ ಪ್ರಾಯೋಗಿಕ ಪರೀಕ್ಷೆ ಯಶಸ್ವಿ