
ಲಖನೌ(ಮೇ.23): ಬಡವರಿಗೆ ಕಡಿಮೆ ದರದಲ್ಲಿ ಆಹಾರ ಒದಗಿಸುವ ಉದ್ದೇಶದಿಂದ ತಮಿಳುನಾಡಿನಲ್ಲಿ ಅಮ್ಮಾ ಕ್ಯಾಂಟೀನ್ ಮಾದರಿಯಲ್ಲಿ ಉತ್ತರ ಪ್ರದೇಶದಾದ್ಯಂತ ‘ಅನ್ನಪೂರ್ಣ ಭೋಜನಾಲಯ’ಗಳನ್ನು ತೆರೆಯಲು ಸಿಎಂ ಯೋಗಿ ಆದಿತ್ಯನಾಥ್ ನೇತೃತ್ವದ ಸರ್ಕಾರ ನಿರ್ಧರಿಸಿದೆ. ರಾಜ್ಯದಲ್ಲಿ ಪ್ರತಿಯೊಬ್ಬರಿಗೂ ಅಗತ್ಯ ಆಹಾರ ಒದಗಿಸುವ ಉದ್ದೇಶದಿಂದ ಈ ಯೋಜನೆ ಜಾರಿಗೊಳಿಸಲಾಗುತ್ತಿ ಎಂದು ಸಿಎಂ ಕಚೇರಿ ಗುರುವಾರ ಟ್ವಿಟರ್ನಲ್ಲಿ ಮಾಹಿತಿ ನೀಡಿದೆ. ಹೊಟ್ಟೆ ಹಸಿದವರಿಗೆ ಅನ್ನಪೂರ್ಣ ಭೋಜನಾಲಯಗಳು ಅನಿಯಮಿತ ಆಹಾರ ನೀಡಲಿವೆ. ಭೋಜನಾಲಯಗಳಲ್ಲಿ ಗಂಜಿ, ಚಹಾ, ಅನ್ನ ಸಾಂಬರ್ಗೆ 3 ರುಪಾಯಿ ಇರಲಿದ್ದು, ರೋಟಿ, ದಾಲ್ ಮತ್ತು ಅನ್ನದ ಊಟಕ್ಕೆ 5 ರುಪಾಯಿ ದರ ವಿಧಿಸಲು ನಿರ್ಧರಿಸಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.