
ಬೆಂಗಳೂರು (ನ.18): ರಾಯಚೂರಿನಲ್ಲಿ ಡಿಸೆಂಬರ್ನಲ್ಲಿ ನಡೆಯಲಿರುವ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಸರ್ಕಾರಿ ಶಾಲೆ ಮತ್ತು ಮಾತೃಭಾಷೆ ಅಳಿವು-ಉಳಿವಿನ ಕುರಿತ ಚರ್ಚೆಗೆ ಪ್ರಥಮ ಆದ್ಯತೆ ನೀಡಬೇಕು ಎಂದು ಆಗ್ರಹಿಸಿ ಸಮಾನ ಶಿಕ್ಷಣಕ್ಕಾಗಿ ಜನಾಂದೋಲನ ನ.27ರಂದು ನಗರದಲ್ಲಿ ಶಿಕ್ಷಕ, ಪೋಷಕರ ಹಾಗೂ ಚಿಂತರನ್ನೊಳಗೊಂಡ ಸಮಾವೇಶ ಹಮ್ಮಿಕೊಂಡಿದೆ.
ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸಂಘಟನೆಯ ಮುಖಂಡ ಶ್ರೀಪಾದ್ ಭಟ್, ಕನ್ನಡ ರಾಜ್ಯೋತ್ಸವದಂದು ಭಾಷಣಗಳಲ್ಲಿ ಪ್ರಸ್ತಾಪಿಸುವ ಯಾವ ಭರವಸೆಯನ್ನೂ ರಾಜ್ಯ ಸರ್ಕಾರ ಪ್ರಾಮಾಣಿಕವಾಗಿ ಈಡೇರಿಸಲು ಮುಂದಾಗಿಲ್ಲ. ಇದುವರೆಗೂ ಕನ್ನಡ ಶಾಲೆಗಳ ಉಳಿವಿಗಾಗಿ, ಮಾತೃಭಾಷಾ ಶಿಕ್ಷಣ ಹಾಗೂ ಕನ್ನಡ ಉಳಿಸಿ-ಬೆಳೆಸುವ ಕುರಿತು ವಿಶೇಷ ಗಮನ ನೀಡಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಕನ್ನಡ ಸಾಹಿತ್ಯ ಪರಿಷತ್ ನೆಪ ಮಾತ್ರಕ್ಕೆ ಎಂಬಂತಾಗಿದ್ದು, ನಾಡು-ನುಡಿಗಾಗಿ ಕೆಲಸ ಮಾಡುವುದನ್ನು ಮರೆತಿವೆ ಎಂದರು.
(ಸಾಂದರ್ಭಿಕ ಚಿತ್ರ)
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.