
ಬೆಂಗಳೂರು[ಮಾ. 05] ಅಡಿಶನಲ್ ಕಮಾಂಡೆಟ್ ಜನರಲ್, ಹೋಮ್ ಗಾರ್ಡ್ಸ್ ಮತ್ತು ನಾಗರಿಕ ಭದ್ರತೆ ಇಲಾಖೆ ಹೆಚ್ಚುವರಿ ನೀರ್ದೇಶಕಿಯಾಗಿದ್ದ ಡಿ. ರೂಪಾ ಅವರನ್ನು ಬೆಂಗಳೂರು ರೈಲ್ವೆ ಪೊಲೀಸ್ ವಿಭಾಗದ ಐಜಿಪಿಯಾಗಿ ವರ್ಗಾವಣೆ ಮಾಡಲಾಗಿದೆ.
ಮೈಸೂರು ವಿಭಾಗದ ಕಾನೂನು ಮತ್ತು ಸುವ್ಯವಸ್ಥೆ ಡಿಸಿಪಿಯಾಗಿದ್ದ ಎನ್. ವಿಷ್ಣುವರ್ಧನ ಅವರನ್ನು ಮೈಸೂರು ದಕ್ಷಿಣ ವಿಭಾಗ ಭ್ರಷ್ಟಾಚಾರ ನಿಗ್ರಹ ದಳದ ಎಸ್ ಪಿಯಾಗಿ ವರ್ಗಾವಣೆ ಮಾಡಲಾಗಿದೆ.
17 ಐಎಎಸ್,33 ಐಪಿಎಸ್ ವರ್ಗಾವಣೆ ಹಿಂದಿದೆ ಅಸಲಿ ಕಾರಣ!
ಫೆಬ್ರವರಿ ಅಂತ್ಯದ ವೇಳೆ 48 ಗಂಟೆಗಳ ಅವಧಿಯಲ್ಲಿ ರಾಜ್ಯ ಸರಕಾರ 17 ಐಎಎಸ್, 33 ಐಪಿಎಸ್, ಒಬ್ಬರು ಕೆಎಎಸ್ ಅಧಿಕಾರಿಗಳ ಸ್ಥಾನ ಪಲ್ಲಟ ಮಾಡಿತ್ತು. ಲೋಕ ಸಮರ ಹತ್ತಿರವಾಗುತ್ತಿರುವ ಕಾರಣಕ್ಕೆ ವರ್ಗಾವಣೆ ಜೋರಾಗಿ ನಡೆಯುತ್ತಿದೆ ಎಂಬ ಮಾತು ಕೇಳಿ ಬಂದಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.