
ನವದೆಹಲಿ: ರೈಲು ಮತ್ತು ರೈಲ್ವೆ ನಿಲ್ದಾಣಗಳ ಗುಣಮಟ್ಟಮತ್ತು ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡಿರುವ ಕೇಂದ್ರ ಸರ್ಕಾರ, ಇದೀಗ ರೈಲು ನಿಲ್ದಾಣಗಳ ಮತ್ತು ರೈಲುಗಳ ಸ್ವಚ್ಛತೆ ಮತ್ತು ನೈರ್ಮಲ್ಯದ ಕುರಿತು ಪ್ರಯಾಣಿಕರು ರೇಟಿಂಗ್ ನೀಡುವ ವ್ಯವಸ್ಥೆ ಜಾರಿಗೆ ನಿರ್ಧರಿಸಿದೆ. ಪ್ರಯಾಣಿಕರ ರೇಟಿಂಗ್ ಆಧರಿಸಿ, ಸ್ವಚ್ಛ ಕಾರ್ಯಕ್ಕೆ ನಿಯೋಜನೆಯಾಗಿರುವ ಗುತ್ತಿಗೆದಾರರಿಗೆ ಹಣ ಪಾವತಿ ಮಾಡಲಾಗುತ್ತದೆ.
ಪ್ರಯಾಣಿಕರ ಫೀಡ್ಬ್ಯಾಕ್ಗಳನ್ನು ಜಿಪಿಎಸ್ ಆಧಾರಿತ ವ್ಯವಸ್ಥೆಯಲ್ಲಿ ಸಂಗ್ರಹಿಸಲಾಗುತ್ತದೆ. ರೈಲ್ವೆ ನಿಲ್ದಾಣ ಮತ್ತು ರೈಲುಗಳ ಸ್ವಚ್ಛತೆಗೆ ಅನುಗುಣವಾಗಿ ಪ್ರಯಾಣಿಕರು ನೀಡುವ ರೇಟಿಂಗ್ ಆಧರಿಸಿ, ಗುತ್ತಿಗೆದಾರರಿಗೆ ಪಾವತಿಸಲು ನಿರ್ಧರಿಸಲಾಗಿದ್ದು, ಸ್ವಚ್ಛತೆ ಬಗ್ಗೆ ಪ್ರಯಾಣಿಕರು ಅಸಮಾಧಾನ ವ್ಯಕ್ತಪಡಿಸಿ ರೇಟಿಂಗ್ ನೀಡಿದಲ್ಲಿ, ಗುತ್ತಿಗೆದಾರರ ಮೇಲೆ ಶೇ.30ರಷ್ಟುದಂಡ ವಿಧಿಸಲಾಗುತ್ತದೆ.
ಉಳಿದಂತೆ ಸ್ವಚ್ಛತೆಗಾಗಿನ ಸಿಬ್ಬಂದಿಗಳ ಹಾಜರಾತಿ, ಶುಚಿತ್ವ ಸೇರಿದಂತೆ ಇತರ ಅಂಶಗಳು ರೈಲ್ವೆ ಇಲಾಖೆಯಿಂದ ಗುತ್ತಿಗೆದಾರರಿಗೆ ಬಿಡುಗಡೆಯಾಗಬೇಕಾದ ಹಣದ ಮೇಲೆ ಪರಿಣಾಮ ಉಂಟಾಗಲಿದೆ. ಪ್ರಯಾಣಿಕರ ರೇಟಿಂಗ್ ಆಧರಿಸಿಯೇ ಗುತ್ತಿಗೆದಾರರ ಮೇಲೆ ದಂಡ ವಿಧಿಸಬೇಕೆ ಅಥವಾ ಪ್ರೋತ್ಸಾಹಕ ಹಣ ನೀಡಬೇಕೆ ಎಂಬುದನ್ನು ನಿರ್ಧರಿಸಲಾಗುತ್ತದೆ ಎಂದು ರೈಲ್ವೆ ಇಲಾಖೆ ಹೇಳಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.