
ಬೆಂಗಳೂರು (ಡಿ. 21): ರಾಜ್ಯ ನಿರುದ್ಯೋಗಿ ವಿಕಲಚೇತನ ಸಂಘರ್ಷ ಸಮಿತಿಯ ಅನಿರ್ಧಿಷ್ಠಾವಧಿ ಪ್ರತಿಭಟನೆ ಮೂರನೇ ದಿನಕ್ಕೆ ಕಾಲಿಟ್ಟಿದೆ.
ಫ್ರೀಡಂ ಪಾರ್ಕ್ ನಲ್ಲಿ ನಡೆಯುತ್ತಿರುವ ಧರಣಿಯಲ್ಲಿ ಮಹಿಳೆಯರು ಸೇರಿದಂತೆ ನೂರಕ್ಕೂ ಹೆಚ್ಚು ಜನರು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದಾರೆ. ದುಡಿಯುವ ಕೈಗೆ ನೌಕರಿ ಕೊಡಿ ಇಲ್ಲವೆ ಭಿಕ್ಷೆ ಬೇಡಲು ಅವಕಾಶ ಕೊಡಿ ಎಂಬ ಘೋಷವಾಕ್ಯದೊಂದಿಗೆ ಅಹೋರಾತ್ರಿ ಪ್ರತಿಭಟನೆ ನಡೆಸುತ್ತಿದ್ದಾರೆ.
ವಿಕಲಚೇತನರಿಗೆ ಸರ್ಕಾರಿ ಉದ್ಯೋಗದಲ್ಲಿರುವ ಮೀಸಲಾತಿ ಅಸಮಾನತೆಯನ್ನು ಹೋಗಲಾಡಿಸಬೇಕು. ವಿಶೇಷಚೇತನರಿಗಾಗಿಯೆ ಪ್ರತ್ಯೇಕ ಮಂತ್ರಿ ಬೇಕೆಂದು ಆಗ್ರಹಪಡಿಸಿದ್ದಾರೆ.
ಪ್ರತಿಭಟನೆ ಮೂರನೇ ದಿನಕ್ಕೆ ಕಾಲಿಟ್ಟರು ಸರ್ಕಾರ ನಮ್ಮತ್ತ ಗಮನಹರಿಸುತ್ತಿಲ್ಲವೆಂದು ಆಕ್ರೋಶ ವ್ಯಕ್ತಪಡಿಸಿದ್ದು ಪ್ರತಿಭಟನೆ ನಿರ್ಲಕ್ಷ ಮಾಡಿದ್ರೆ ಅಮರಾಣಾಂತಿಕ ಉಪವಾಸ ಸತ್ಯಾಗ್ರಹ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.