'ಬಿಎಸ್‌ವೈ ಆಪ್ತ ಸಂತೋಷ್ ಕಿಡ್ನಾಪ್ ಮಾಡಿಸಿ ಕರೆದುಕೊಂಡು ಹೋಗ್ತಿದ್ದಾರೆ, ಬೇಗ ಬನ್ನಿ'

Published : Jul 08, 2019, 01:23 PM ISTUpdated : Jul 08, 2019, 03:08 PM IST
'ಬಿಎಸ್‌ವೈ ಆಪ್ತ ಸಂತೋಷ್ ಕಿಡ್ನಾಪ್ ಮಾಡಿಸಿ ಕರೆದುಕೊಂಡು ಹೋಗ್ತಿದ್ದಾರೆ, ಬೇಗ ಬನ್ನಿ'

ಸಾರಾಂಶ

ಸಂತೋಷ್ ನಮ್ಮನ್ನ ಕಿಡ್ನಾಪ್ ಮಾಡಿಸಿ ಮುಂಬೈ ಕರೆದುಕೊಂಡು ಹೋಗ್ತಿದ್ದಾರೆ ಬನ್ನಿ ಎಂದರು| ಅರ್ಜೆಂಟ್ ಏರ್ಪೋರ್ಟ್ ಗೆ ಬನ್ನಿ ಎಂದ್ರು| ಪಕ್ಷೇತರ ಸಚಿವನ ಬಗ್ಗೆ ಡಿಕೆಶಿ ಮಾತು

ಬೆಂಗಳೂರು[ಜು.08]: ದೋಸ್ತಿ ಸರ್ಕಾರ ಅಧಿಕಾರ ಕಳೆದುಕೊಳ್ಳುವ ಭೀತಿಯಲ್ಲಿದೆ. ಈವರೆಗೆ ಹಲವಾರು ಶಾಸಕರು/ಸಚಿವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಮೈತ್ರಿ ನಾಯಕರಿಗೆ ನುಂಗಲಾರದ ತುತ್ತಾಗಿದೆ. ಆದರೀಗ ರಾಜೀನಾಮೆ ನೀಡಿದ ಸಚಿವ ಎಚ್. ನಾಗೇಶ್ ವಿಚಾರವಾಗಿ ಡಿ. ಕೆ. ಶಿವಕುಮಾರ್ ನೀಡಿರುವ ಹೇಳಿಕೆ ಭಾರೀ ಅನುಮಾನ ಹುಟ್ಟು ಹಾಕಿದೆ.

"

ನನ್ನ ಬೆಂಬಲ ಬಿಜೆಪಿಗೆ, ಪಕ್ಷೇತರ ಶಾಸಕ ನಾಗೇಶ್: ಬಿಜೆಪಿ ಬಲ 106ಕ್ಕೇರಿಕೆ!

ಇಂದು ಶನಿವಾರ ಬೆಳಗ್ಗೆ ಮುಳಬಾಗಿಲು ಶಾಸಕ ಹಾಗೂ ಸಣ್ಣ ಕೈಗಾರಿಕೆ ಖಾತೆ ಸಚಿವ ಎಚ್. ನಾಗೇಶ್ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಅಲ್ಲದೇ ತಮ್ಮ ರಾಜೀನಾಮೆ ಪತ್ರದಲ್ಲಿ ಎಚ್. ಡಿ . ಕುಮಾರಸ್ವಾಮಿ ಸರ್ಕಾರಕ್ಕೆ ನೀಡಿರುವ ಬೆಂಬಲ ಹಿಂಪಡೆಯುತ್ತೇನೆ. ಇನ್ಮುಂದೆ ಬಿಜೆಪಿಗೆ ನನ್ನ ಬೆಂಬಲವಿರುತ್ತದೆ' ಎಂದು ತಿಳಿಸಿದ್ದರು. ಆದರೆ ರಾಜೀನಾಮೆ ಸಲ್ಲಿಸಿದ್ದ ಎಚ್. ನಾಗೇಶ್ ಮುಂಬೈಗೆ ತೆರಳುವ ಮುನ್ನ ಅವರನ್ನು ಭೇಟಿಯಾಗಿ ಮನವೊಲಿಸಲು ಕಾಂಗ್ರೆಸ್ ನಾಯಕರು HAL ವಿಮಾನ ನಿಲ್ದಾಣಕ್ಕೆ ದೌಡಾಯಿಸಿದ್ದರಾದರೂ ಯಾವುದೇ ಪ್ರಯೋಜನವಾಗಿರಲಿಲ್ಲ.

ಕರ್ನಾಟಕ ರಾಜಕಾರಣದಲ್ಲಿ ಅಲ್ಲೋಲ ಕಲ್ಲೋಲ: ಎಲ್ಲಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ಕಿಸಿ

ಆದರೀಗ ಈ ಪ್ರಸಂಗದ ಬೆನ್ನಲ್ಲೇ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಡಿ. ಕೆ. ಶಿವಕುಮಾರ್ 'ನಾಗೇಶ್ ನನಗೆ ಬೇರೆಯವರ ಕೈಯ್ಯಲ್ಲಿ ಕರೆ ಮಾಡಿಸಿದ್ರು. ಸಂತೋಷ್ ನಮ್ಮನ್ನು ಕಿಡ್ನಾಪ್ ಮಾಡಿಸಿ ಮುಂಬೈ ಕರೆದುಕೊಂಡು ಹೋಗ್ತಿದ್ದಾರೆ 1 ಗಂಟೆಯೊಳಗೆ ವಿಮಾನ ನಿಲ್ದಾಣಕ್ಕೆ ಬನ್ನಿ ಎಂದು ಕಣ್ಣೀರು ಹಾಕಿದ್ದರು. ಆದರೆ 1 ಗಂಟೆಗೆ ಇದ್ದ ವಿಮಾನ ಬೇಗ ಟೇಕ್ ಆಫ್ ಮಾಡಿಸಿದ್ದಾರೆ. ಇದು ಖಂಡನೀಯ. ಆದರೆ ನಮ್ಮ ಪ್ರಯತ್ನ ನಾವು ಮಾಡ್ತೀವಿ. ನಾಗೇಶ್ ರಾಜೀನಾಮೆ ಪತ್ರ ಹಿಂಪಡೆಯುತ್ತಾರೆ ಎನ್ನುವ ವಿಶ್ವಾಸವಿದೆ' ಎಂದಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಭಾರತೀಯರ ಬಳಿ ಇದೆ ವಿಶ್ವದ ಟಾಪ್ 10 ಬ್ಯಾಂಕ್‌ಗಳಲ್ಲಿ ಇರುವುದಕ್ಕಿಂತ ಹೆಚ್ಚು ಚಿನ್ನ: ಬಲಿಷ್ಠ ರಾಷ್ಟ್ರಗಳ ಜಿಡಿಪಿಯನ್ನೂ ಮೀರಿಸಿದ ಸಂಪತ್ತು
Post Office Scheme: ದಿನಕ್ಕೆ ₹300 ಉಳಿಸಿ, 10 ವರ್ಷದಲ್ಲಿ ₹15 ಲಕ್ಷ ನಿಮ್ಮದಾಗಿಸಿಕೊಳ್ಳಿ!