ಈ ಬಾರಿಯೂ ಜೆಡಿಎಸ್ ನಾಯಕನ ಆಸೆಗೆ ತಣ್ಣೀರು : ಪಕ್ಷೇತರ ಶಾಸಕಗೆ ಸಚಿವ ಸ್ಥಾನ

Published : Jun 14, 2019, 11:45 AM ISTUpdated : Jun 14, 2019, 11:54 AM IST
ಈ ಬಾರಿಯೂ ಜೆಡಿಎಸ್ ನಾಯಕನ ಆಸೆಗೆ ತಣ್ಣೀರು : ಪಕ್ಷೇತರ ಶಾಸಕಗೆ ಸಚಿವ ಸ್ಥಾನ

ಸಾರಾಂಶ

ಈ ಬಾರಿಯೂ ಕೂಡ ಸಚಿವ ಸ್ಥಾನ ಪಡೆಯುವ ಜೆಡಿಎಸ್ ನಾಯಕನ ಆಸೆಗೆ ತಣ್ಣೀರು ಎರಚಿದಂತಾಗಿದೆ. ಆದರೆ ಜೆಡಿಎಸ್ ನಿಂದ ಪಕ್ಷೇತರ ವ್ಯಕ್ತಿಗೆ ಸಚಿವ ಸ್ಥಾನ ನೀಡಲಾಗುತ್ತಿದೆ. 

ಬೆಂಗಳೂರು (ಜೂ.14) : ಈ ಬಾರಿಯೂ ಜೆಡಿಎಸ್ ಮುಖಂಡ ಬಿಎಂ ಫಾರೂಕ್ ಗೆ ಸಚಿವ ಸ್ಥಾನ ಕೈ ತಪ್ಪಿದೆ. ಸಚಿವ ಸಂಪುಟ ವಿಸ್ತರಣೆ ವೇಳೆ ಸಚಿವ ಸ್ಥಾನ ಸಿಗುವ ನಿರೀಕ್ಷೆಯಲ್ಲಿದ್ದ ನಾಯಕಗೆ ನಿರಾಸೆಯಾಗಿದೆ. 

ಬೆಳ್ಳಂಬೆಳಗ್ಗೆ ಸಿಎಂ ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿದ್ದು, ಪಕ್ಷ ಸಂಕಷ್ಟದಲ್ಲಿದ್ದು,  ಈ ವೇಳೆ ನಿಮ್ಮ ಸಹಕಾರ ಅಗತ್ಯ ಎಂದು ಫಾರೂಕ್ ಬಳಿ ಕುಮಾರಸ್ವಾಮಿ ಮನವಿ ಮಾಡಿದ್ದಾರೆ. 

ಹೀಗಾಗಿ ಸಚಿವ ಸ್ಥಾನದ ನಿರೀಕ್ಷೆಯಲ್ಲಿದ್ದ ಫಾರೂಕ್ ಆಸೆಗೆ ತಣ್ಣೀರು ಎರಚಿದಂತಾಗಿದೆ. ಆದ್ದರಿಂದ ಈ ಬಾರಿಯೂ ಕೂಡ ಜೆಡಿಎಸ್ ನಿಂದ ಅಲ್ಪಸಂಖ್ಯತರಿಗೆ ಮಂತ್ರಿ ಸ್ಥಾನ ತಪ್ಪಿದಂತಾಗಿದೆ. 

ಮತ್ತೊಬ್ಬ ಜೆಡಿಎಸ್ ಶಾಸಕನ ಸ್ಥಾನಕ್ಕೆ ಬೀಳುತ್ತಾ ಕೊಕ್?

ಈ ಹಿಂದೆ ಅಲ್ಪಸಂಖ್ಯಾತರಾದ ಬಿಎಂ ಫಾರೂಕ್ ಅವರನ್ನು ಮಂತ್ರಿ ಮಾಡಲು ಜೆಡಿಎಸ್ ಮುಖಂಡ ಎಚ್.ಡಿ.ದೇವೇಗೌಡರು ಬಯಸಿದ್ದರು. ಆದರೆ ಈಗ ಪಕ್ಷದಲ್ಲಿ ಹಲವು ರೀತಿಯ ಸಮಸ್ಯೆಗಳಿದ್ದು, ತಾಳ್ಮೆಯಿಂದ ಇರಿ ಎಂದು ಸಿಎಂ ಕುಮಾರಸ್ವಾಮಿ ಕೇಳಿಕೊಂಡಿದ್ದಾರೆ. 

ಸಂಪುಟ ವಿಸ್ತರಣೆಗೆ ಕೊನೆಗೂ ಮುಹೂರ್ತ : ಇಬ್ಬರಿಗೆ ಸಚಿವ ಸ್ಥಾನ

ಇಂದು ಸಚಿವ ಸಂಪುಟ ವಿಸ್ತರಣೆಯಾಗಲಿದ್ದು, ಪಕ್ಷೇತರ ಶಾಸಕರಾಗಿರುವ ನಾಗೇಶ್ ಅವರಿಗೆ ಸಚಿವ ಸ್ಥಾನ ನೀಡಲು ಜೆಡಿಎಸ್ ನಿಂದ ನಿರ್ಧರಿಸಲಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

Viral Video: ವೇದಿಕೆಯಲ್ಲೇ ಮಹಿಳಾ ವೈದ್ಯೆಯ ಹಿಜಾಬ್‌ ತೆಗೆಯಲು ಯತ್ನಿಸಿದ ಬಿಹಾರ ಸಿಎಂ ನಿತೀಶ್‌ ಕುಮಾರ್‌
ಅನುದಾನಿತ ಶಾಲೆಯಲ್ಲಿ 9ನೇ ಕ್ಲಾಸ್ ಹುಡ್ಗೀರ ಎಣ್ಣೆ ಪಾರ್ಟಿ; ವೈರಲ್ ವಿಡಿಯೋ ಆಧರಿಸಿ 6 ವಿದ್ಯಾರ್ಥಿನಿಯರು ಅಮಾನತು!