
ನವದೆಹಲಿ : ರಾಣಿಬೆನ್ನೂರಿನ ಪಕ್ಷೇತರ ಶಾಸಕ ಶಂಕರ್ ದೆಹಲಿಯಲ್ಲಿ ಸಿದ್ದರಾಮಯ್ಯ ಅವರ ಜೊತೆ ಕಾಣಿಸಿಕೊಂಡು ಸುದ್ದಿಯಾಗಿದ್ದಾರೆ.
ಶನಿವಾರ ಬೆಳಗ್ಗೆ ಸಿದ್ದರಾಮಯ್ಯ ಅವರ ಜೊತೆಗೆಯೇ ಕರ್ನಾಟಕ ಭವನಕ್ಕೆ ಆಗಮಿಸಿದ ಶಂಕರ್ ಆ ಬಳಿಕ ಸಂಜೆ ಸಿದ್ದರಾಮಯ್ಯ ಅವರೊಂದಿಗೆಯೇ ಕರ್ನಾಟಕ ಭವನದಿಂದ ನಿರ್ಗಮಿಸಿದರು. ಈ ಬಗ್ಗೆ ಶಂಕರ್ ಅವರನ್ನು ಪ್ರಶ್ನಿಸಿದಾಗ, ನಾನು ಬೇರೆ ಕಾರಣದಿಂದ ಡೆಲ್ಲಿಗೆ ಬಂದಿದ್ದೆ. ಸಿದ್ದರಾಮಯ್ಯ ಕೂಡ ಬಂದಿದ್ದರು.
ಈ ಸಂದರ್ಭದಲ್ಲಿ ಭೇಟಿಯಾಗಿದ್ದೇವೆ. ನಾನು ಯಾರನ್ನೂ ಬೆಂಬಲಿಸುವ ಬಗ್ಗೆ ತೀರ್ಮಾನ ಕೈಗೊಂಡಿಲ್ಲ. ನನ್ನ ಬೆಂಬಲವನ್ನು ಯಾರೂ ಕೇಳಿಯೂ ಇಲ್ಲ. ಸಂದರ್ಭ ಬಂದಾಗ ತೀರ್ಮಾನ ಕೈಗೊಳ್ಳುತ್ತೇನೆ. ಸಿದ್ದರಾಮಯ್ಯ ಅವರ ಜೊತೆ ರಾಜಕೀಯ ಚರ್ಚೆ ಮಾಡಿಲ್ಲ ಎಂದು ಹೇಳಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.