
ಡೆಹ್ರಾಡೂನ್: ‘ನಾವು ಎಚ್ಚರವಾಗಿದ್ದೇವೆ ಮತ್ತು ಡೋ ಕ್ಲಾಂನಲ್ಲಿ ಯಾವುದೇ ಅನಿರೀಕ್ಷಿತ ಸ್ಥಿತಿ ಎದುರಿ ಸಲು ಸಿದ್ಧರಾಗಿದ್ದೇವೆ. ನಮ್ಮ ಸೇನಾ ಪಡೆಗಳನ್ನು ಸತತ ಆಧುನಿಕೀಕರಣದತ್ತ ನಾವು ಕಾರ್ಯ ನಿರ್ವಹಿಸುತ್ತಿದ್ದೇವೆ. ನಾವು ನಮ್ಮ ಭೂವ್ಯಾಪ್ತಿಯ ಸಮಗ್ರತೆಯನ್ನು ಕಾಪಾಡುತ್ತೇವೆ’ ಎಂದು ನಿರ್ಮಲಾ ಹೇಳಿದ್ದಾರೆ.
ಡೋಕ್ಲಾಂ ವಿವಾದ ಇನ್ನೇನು ತಣ್ಣಗಾಯಿತು ಎನ್ನುವ ಹಂತದಲ್ಲೇ, ಮತ್ತೆ ಭಾರತ ಮತ್ತು ಚೀನಾ ನಡುವೆ ವಾಕ್ಸಮರ ಆರಂಭವಾಗಿದ್ದು, ಈ ನಿಟ್ಟಿನಲ್ಲಿ ನಿರ್ಮಲಾ ಸೀತಾರಾಮನ್ ಈ ಮಾತನ್ನು ಹೇಳಿದ್ದಾರೆ.
ಡೋಕ್ಲಾಂನಲ್ಲಿ ಯಾವುದೇ ಅನಿರೀಕ್ಷಿತ ಪರಿಸ್ಥಿತಿ ಎದುರಿಸಲು ಭಾರತ ಸಿದ್ಧವಾಗಿದೆ ಎಂದು ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಚೀನಾಕ್ಕೆ ಎಚ್ಚರಿಕೆ ನೀಡಿದ್ದಾರೆ. ನಮ್ಮ ಭೂಭಾಗದ ಒಂದಿಂಚು ಜಾಗ ವನ್ನೂ ನಾವು ಯಾರಿಗೂ ಬಿಟ್ಟುಕೊಡುವುದಿಲ್ಲ.
ತಮ್ಮ ಶತ್ರುಗಳ ವಿರುದ್ಧ ಭೀಕರ ಯುದ್ಧಕ್ಕೆ ಸಿದ್ಧರಿದ್ದೇವೆ ಎಂದು ಚೀನಾ ಅಧ್ಯಕ್ಷ ಕ್ಸಿ ಜಿನ್ಪಿಂಗ್ ಹೇಳಿದ ಬೆನ್ನಲ್ಲೇ ಈ ಹೇಳಿಕೆ ಹೊರಬಿದ್ದಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.