
ಅಮೃತಸರ(ಜ.26): ಗಣರಾಜ್ಯೋತ್ಸವದ ಪ್ರಯುಕ್ತ ಭಾರತೀಯ ಗಡಿ ಭದ್ರತಾ ಪಡೆ ಸಿಬ್ಬಂದಿ ಇಲ್ಲಿನ ಗಡಿಪೋಸ್ಟ್'ನಲ್ಲಿ ಪಾಕಿಸ್ತಾನ ಯೋಧರಿಗೆ ಸಿಹಿ- ಹಣ್ಣುಗಳನ್ನು ನೀಡಿದರು.
ಈ ವೇಳೆ ಪಾಕಿಸ್ತಾನ ಗಡಿ ಭದ್ರತಾ ಪಡೆಯ ಕಮಾಂಡರ್ ಸೇರಿದಂತೆ ಪಾಕ್'ನ ಎಲ್ಲಾ ಯೋಧರು ಸಿಹಿಯನ್ನು ಪಡೆದು ಭಾರತೀಯ ಯೋಧರಿಗೆ ಹಸ್ತಲಾಘವ ಮಾಡಿದರು ಹಾಗೂ ಶುಭಾಶಯ ಕೋರಿದರು ಎಂದು ಬಿಎಸ್'ಎಫ್ ಅಧಿಕಾರಿ ಮಾಹಿತಿ ನೀಡಿದ್ದಾರೆ.
ಉರಿ ದಾಳಿಯ ನಂತರ ಪಾಕಿಸ್ತಾನ ಹಾಗೂ ಭಾರತದಲ್ಲಿ ಸದಾ ಉದ್ವಿಗ್ನದ ವಾತಾವರಣ ನಿರ್ಮಾಣವಾಗಿತ್ತು. ಸ್ವಾತಂತ್ರ ದಿನಾಚರಣೆ, ಗಣರಾಜ್ಯೋತ್ಸವ ಮಾತ್ರವಲ್ಲದೇ ದೀಪಾವಳಿ ಹಾಗೂ ಈದ್ ಹಬ್ಬದ ಸಂದರ್ಭದಲ್ಲೂ ಉಭಯ ದೇಶದ ಸೈನಿಕರು ಸಿಹಿ ಹಂಚಿ ಸಂಭ್ರಮಿಸುತ್ತಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.