
ನವದೆಹಲಿ (ಸೆ.06): ಡೋಕ್ಲಾಮ್ ಪ್ರದೇಶದಿಂದ ಸೇನೆಯನ್ನು ಚೀನಾ ವಾಪಸ್ ಕರೆಸಿಕೊಂಡು ಉಭಯ ದೇಶದ ನಡುವಿನ ಬಿಕ್ಕಟ್ಟು ಬಗೆಹರಿದಿದ್ದರೂ ಕೂಡಾ ಚೀನಾ ನಿಧಾನವಾಗಿ ಭಾರತದ ಪ್ರದೇಶಗಳನ್ನು ಕಬಳಿಸುತ್ತಿದೆ. ಭಾರತದ ಮಿತಿಯನ್ನು ಪರೀಕ್ಷಿಸುತ್ತಿದೆ ಎಂದು ಸೇನಾ ಮುಖ್ಯಸ್ಥ ಬಿಪಿನ್ ರಾವತ್ ಹೇಳಿದ್ದಾರೆ.
ಚೀನಾ ತನ್ನ ಕಬಂಧ ಬಾಹುಗಳನ್ನು ಭಾರತದತ್ತ ಚಾಚಲು ಶುರು ಮಾಡಿದೆ. ನೆರೆಯ ಪಾಕಿಸ್ತಾನ ಪರಿಸ್ಥಿಯ ಲಾಭವನ್ನು ಪಡೆಯಲು ಯತ್ನಿಸುತ್ತಿದೆ. ಉತ್ತರ ಗಡಿಯನ್ನು ವಿಸ್ತರಿಸಲು ಪ್ರಯತ್ನಿಸುತ್ತಿದೆ. ಚೀನಾ ಮತ್ತು ಪಾಕಿಸ್ತಾನ ಉತ್ತರ ಮತ್ತು ಪಶ್ಚಿಮ ದಿಕ್ಕಿನ ಎದುರಾಳಿಗಳಾಗಿವೆ. ಇವೆರಡೂ ದೇಶಗಳ ಜೊತೆಗಿನ ಯುದ್ಧ ಸಾಧ್ಯತೆಯನ್ನು ತಳ್ಳಿ ಹಾಕುವಂತಿಲ್ಲ. ಎರಡು ಯುದ್ಧಗಳಿಗೆ ದೇಶ ತಯಾರಾಗುವ ಅಗತ್ಯವಿದೆ ಎಂದು ರಾವತ್ ಹೇಳಿದ್ದಾರೆ. ಚೀನಾ ಮತ್ತು ಪಾಕಿಸ್ತಾನ ಯಾವಾಗಲೂ ಬೆದರಿಕೆ ಇದೆ ಎಂದು ರಕ್ಷಣಾ ಸಚಿವಾಲಯ ಪುನರುಚ್ಚಿಸಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.