
ನವದೆಹಲಿ(ಅ.01): ಭಾರತ-ಚೀನಾ ಇತಿಹಾಸದ ಪುಟಗಳನ್ನು ತೆರೆದು ನೋಡಿ, ಹೊಸ ಅಧ್ಯಾಯವನ್ನು ಆರಂಭಿಸಬೇಕು. ದ್ವಿಪಕ್ಷೀಯ ನೆಲೆಯಲ್ಲಿ ಎರಡೂ ರಾಷ್ಟ್ರಗಳು ಸಾಕಷ್ಟು ಪ್ರಗತಿ ಸಾಧಿಸಿವೆ ಎಂದು ಭಾರತಕ್ಕೆ ಚೀನಾದ ರಾಯಭಾರಿ ಲುವೊ ಜವೋ ಹ್ವಿ ಹೇಳಿದ್ದಾರೆ.
ಡೋಕ್ಲಾಮ್ ಬಿಕ್ಕಟ್ಟು ಆರಂಭವಾದ ಬಳಿಕ ಸರಣಿಯಾಗಿ ಭಾರತಕ್ಕೆ ಎಚ್ಚರಿಕೆ ನೀಡುತ್ತಲೇ ಬಂದಿದ್ದ ಚೀನಾ, ಇದೀಗ ಶಾಂತಿಯ ಪ್ರಸ್ತಾಪ ಮುಂದಿಟ್ಟಿದೆ. ಭಾರತ ಹಾಗೂ ಚೀನಾ ಒಂದಾದರೆ ಹನ್ನೊಂದು ಆಗುತ್ತದೆ ಎಂದು ಚೀನಾ ರಾಯಭಾರಿ ಒಗ್ಗಟ್ಟಿನ ಮೂಲ ಮಂತ್ರ ಪಠಿಸಿದ್ದಾರೆ.
ಕ್ಸಿಯಾಮೆನ್'ನಲ್ಲಿ ನಡೆದ ಬ್ರಿಕ್ಸ್ ಸಮಾವೇಶದ ವೇಳೆ ಪ್ರಧಾನಿ ಮೋದಿ ಮತ್ತು ಚೀನಾ ಅಧ್ಯಕ್ಷ ಕ್ಸಿ ಜಿನ್ ಪಿಂಗ್ ಭೇಟಿಯಾಗಿ, ಸಾಮರಸ್ಯ ಮತ್ತು ಸಹಕಾರದ ಸ್ಪಷ್ಟ ಸಂದೇಶ ನೀಡಿದ್ದಾರೆ ಎಂದು ಹೇಳಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.