ಸುಲಭ ಜೀವನಕ್ಕೆ ಭಾರತದ ತಾಂತ್ರಿಕ ನಾವೀನ್ಯದ ಮೂಲಕ ಪರಿಹಾರ: ಮೋದಿ!

Published : Sep 30, 2019, 03:19 PM IST
ಸುಲಭ ಜೀವನಕ್ಕೆ ಭಾರತದ ತಾಂತ್ರಿಕ ನಾವೀನ್ಯದ ಮೂಲಕ ಪರಿಹಾರ: ಮೋದಿ!

ಸಾರಾಂಶ

'ವಿಶ್ವದ ಬೇಡಿಕೆಯ ಪೂರೈಕೆಗಾಗಿ ಭಾರತೀಯ ಸಂಶೋಧನಾ ಕ್ಷೇತ್ರದ ಕೆಲಸ'| ಸಿಂಗಾಪುರ್-ಭಾರತ ಹ್ಯಾಕಥಾನ್ 2019 ಉದ್ಘಾಟಿಸಿ ಮಾತನಾಡಿದ ಪ್ರಧಾನಿ ಮೋದಿ| ಚೆನ್ನೈನ ಐಐಟಿ ಮದ್ರಾಸ್‌ನಲ್ಲಿ ಹ್ಯಾಕಥಾನ್ ಉದ್ಘಾಟಿಸಿದ ಪ್ರಧಾನಿ| 'ಸ್ಟಾರ್ಟ್ ಅಪ್ ವ್ಯವಸ್ಥೆಯಲ್ಲಿ ಪ್ರಮುಖ ಮೂರು ದೇಶಗಳ ಸಾಲಿನಲ್ಲಿ ಭಾರತ'| 'ಜೀವನವನ್ನು ಸುಲಭಗೊಳಿಸಲು ಭಾರತದ ತಾಂತ್ರಿಕ ನಾವೀನ್ಯದ ಮೂಲಕ ಪರಿಹಾರ'|

ಚೆನ್ನೈ(ಸೆ.30): ವಿಶ್ವದ ಬೇಡಿಕೆಯ ಪೂರೈಕೆಗಾಗಿ ಭಾರತೀಯ ಸಂಶೋಧನಾ ಕ್ಷೇತ್ರ ನಿರಂತರವಾಗಿ ದುಡಿಯುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಶ್ಲಾಘಿಸಿದ್ದಾರೆ.

ಚೆನ್ನೈನ ಐಐಟಿ ಮದ್ರಾಸ್‌ನಲ್ಲಿ ಸಿಂಗಾಪುರ್-ಭಾರತ ಹ್ಯಾಕಥಾನ್ 2019ನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ಭಾರತದಲ್ಲಿ ಶಾಲಾ ಹಂತದಿಂದ ಉನ್ನತ ಶಿಕ್ಷಣ ಹಾಗೂ ಸಂಶೋಧನೆಯ ಪರಿಸರ ನಿರ್ಮಿಸಲಾಗಿದ್ದು, ಈ ಪರಿಸರ ಸಂಶೋಧನೆಗೆ ಮಾಧ್ಯಮವಾಗಿ ಕೆಲಸ ಮಾಡುತ್ತಿದೆ ಎಂದು ಮೋದಿ ಹೇಳಿದರು.

ಸ್ಟಾರ್ಟ್ ಅಪ್ ವ್ಯವಸ್ಥೆಯಲ್ಲಿ ಪ್ರಮುಖ ದೇಶಗಳ ಸಾಲಿನಲ್ಲಿ ಭಾರತ ಮೂರನೇ ಸ್ಥಾನದಲ್ಲಿದ್ದು, ಭಾರತದ ಆರ್ಥಿಕತೆಯಲ್ಲಿ ಸ್ಟಾರ್ಟ್ ಅಪ್‌ಗಳು ನಿರ್ಣಾಯಕ ಪಾತ್ರ ವಹಿಸಲಿವೆ ಎಂದು ಪ್ರಧಾನಿ ಅಭಿಪ್ರಾಯಪಟ್ಟರು.

ಜೀವನವನ್ನು ಸುಲಭಗೊಳಿಸಲು ಭಾರತದ ತಾಂತ್ರಿಕ ನಾವೀನ್ಯದ ಮೂಲಕ ಪರಿಹಾರ ಕಂಡುಹಿಡಿದು, ಅದನ್ನು ಜಾಗತಿಕ ಬಳಕೆಗೆ ಮುಕ್ತಗೊಳಿಸುವುದು ನಮ್ಮ ಉದ್ದೇಶ ಎಂದು ಈ ವೇಳೆ ಪ್ರಧಾನಿ ಮೋದಿ ನುಡಿದರು.

ಈ ವೇಳೆ ಹ್ಯಾಕಥಾನ್'ನಲ್ಲಿ ಪ್ರದರ್ಶನಕ್ಕಿಡಲಾಗಿದ್ದ ಕ್ಯಾಮರಾವೊಂದನ್ನು ನೋಡಿದ ಪ್ರಧಾನಿ, ಇದು ನಮ್ಮ ಸಂಸತ್ತಿಗೆ ಅತ್ಯಂತ ಉಪಯೋಗವಾಗಬಹುದು ಹೀಗಾಗಿ ಕೂಡಲೇ ಲೋಕಸಭಾಧ್ಯಕ್ಷ ಓಂ ಬಿರ್ಲಾ ಜೊತೆ ಈ ಕುರಿತು ಮಾತನಾಡುತ್ತೇನೆ. ಸಂಸತ್ತಿನಲ್ಲಿ ಯಾರು ಗಮನವಿಟ್ಟು ಕೇಳುತ್ತಾರೆ, ಯಾರು ಏನು ಮಾಡುತ್ತಾರೆ ಎಂದು ತಿಳಿದುಕೊಳ್ಳಲು ಈ ಕ್ಯಾಮರಾ ಸಹಾಯವಾಗಬಹುದು ಎಂದು ನಗೆ ಚಟಾಕಿ ಹಾರಿಸಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಮೋದಿ ಅವರೇ ನನ್ನ ಗಂಡ ವಿಕ್ರಂನನ್ನು ಪಾಕಿಸ್ತಾನಕ್ಕೆ ಕಳುಹಿಸಿ: ಪಾಕ್ ಮಹಿಳೆಯ ಮನವಿ
ಕಾರವಾರ ಜೈಲಲ್ಲಿ ಡ್ರಗ್ಸ್‌ಗಾಗಿ ಜೈಲ‌ರ್ ಮೇಲೆ ಕೈದಿಗಳಿಂದ ಹಲ್ಲೆ: ಬೆಂಗಳೂರು ಜೈಲೊಳಗೆ ಸಿಗರೇಟ್ ಸಾಗಿಸಲೆತ್ನಿಸಿ ಸಿಕ್ಕಿಬಿದ್ದ ವಾರ್ಡನ್