
ನವದೆಹಲಿ (ನ.30): ನೋಟ್ ಬ್ಯಾನ್ ಹಾಗೂ ಜಿಎಸ್ಟಿ ಜಾರಿ ಬಳಿಕ ಶುಭಸುದ್ದಿಯೊಂದು ಸಿಕ್ಕಿದೆ. ಕಳೆದ 5 ತ್ರೈಮಾಸಿಕ ವರದಿಗಳಲ್ಲಿ ಕುಸಿತ ಕಾಣುತ್ತಿದ್ದ ಜಿಡಿಪಿ ದರದಲ್ಲಿ ಈ ಭಾರೀ ಏರಿಕೆಯಾಗಿದೆ.
ಮೊದಲ ತ್ರೈಮಾಸಿಕ ಅವಧಿಯಲ್ಲಿ ಶೇ.5.7ರಷ್ಟಿದ್ದ ಜಿಡಿಪಿ ದರ ಈಗ ಶೇ.6.3ಗೆ ಏರಿಕೆಯಾಗಿದೆ. ತಯಾರಿಕಾ ಕ್ಷೇತ್ರದಲ್ಲಿ ಭಾರೀ ಸಾಧನೆ ಕಂಡ ಹಿನ್ನೆಲೆಯಲ್ಲಿ ಈ ಏರಿಕೆಯಾಗಿದೆ. ನೋಟ್ಬ್ಯಾನ್ ಮತ್ತು ಜಿಎಸ್ಟಿ ಜಾರಿಯಿಂದ ಈ ಕ್ಷೇತ್ರದ ಅಭಿವೃದ್ಧಿಗೆ ಭಾರೀ ಹಿನ್ನಡೆಯಾಗಿತ್ತು. ಆದರೆ ಈಗ ಪರಿಸ್ಥಿತಿ ಸುಧಾರಿಸಿದ್ದು, ಈ ಬಾರಿಯ ವರದಿಯಲ್ಲಿ ಆರ್ಥಿಕ ಚೇತರಿಕೆ ಕಂಡಿದೆ. ಕೇಂದ್ರ ಸರ್ಕಾರ ಈ ಬೆಳವಣಿಗೆಯನ್ನು ನಿರೀಕ್ಷಿಸಿತ್ತು. ಹೀಗಾಗಿ ಮುಂದೆ ಇನ್ನಷ್ಟು ಆರ್ಥಿಕ ಚೇತರಿಕೆ ಕಾಣಲಿದೆ ಅನ್ನೋ ಆಶಾಭಾವವನ್ನು ಕೇಂದ್ರ ಸರ್ಕಾರ ಹೊಂದಿದೆ.
ನವದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಕೇಂದ್ರ ವಿತ್ತ ಸಚಿವ ಅರುಣ್ ಜೇಟ್ಲಿ, ನೋಟ್'ಬ್ಯಾನ್ ಮತ್ತು ಜಿಎಸ್ಟಿ ಜಾರಿಯ ಉತ್ತಮ ಫಲಿತಾಂಶದಿಂದಾಗಿ ಇದೀಗ ಜಿಡಿಪಿ ಭಾರೀ ಏರಿಕೆ ಕಂಡಿದೆ. ಮುಂದೆಯೂ ಆರ್ಥಿಕ ಪರಿಸ್ಥಿತಿ ಮತ್ತಷ್ಟು ಸುಧಾರಿಸಲಿದ್ದು, ನಮ್ಮ ಶ್ರಮಕ್ಕೆ ಫಲ ಸಿಗಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.